ನಿವೃತ್ತಿ ಯೋಧರಿಗೆ ಭವ್ಯ ಸ್ವಾಗತ
ಲೋಕದರ್ಶನ ವರದಿ
ಬೈಲಹೊಂಗಲ 04: 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ನಿವೃತ್ತಿಯಾಗಿ ತವರಿಗೆ ಮರಳಿದ ಯೋಧರಿಗೆ ಭವ್ಯ ಸ್ವಾಗತ ಕೋರಲಾಯಿತು.
ಭಾರತೀಯ ಸೇನೆಯಲ್ಲಿ 18 ವರ್ಷಗಳ ಕಾಲ ಪಂಜಾಬ ಹಾಗೂ ಜಮ್ಮುವಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಇಬ್ಬರು ಯೋಧರು ರಾಜ್ಯಕ್ಕೆ ವಾಪಸ್ ಆದರು. ಪಟ್ಟಣದ ಪ್ರವೀಣ ಭಾವಿಹಾಳ, ಇಂಚಲ ಗ್ರಾಮದ ಶಿವಪ್ಪ ದಿನ್ನಿಮನಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಕೇಂದ್ತ ಬಸ್ ನಿಲ್ದಾಣದ ಕರೇಮ್ಮ ದೇವಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ನಿವೃತ್ತ ಯೋಧರನ್ನು ಮೆರವಣಿಗೆ ಮಾಡಲಾಯಿತು. ನೂರಾರು ದೇಶಭಕ್ತ ಯುವಕರು ಬೋಲೋ ಭಾರತ ಮಾತಾ ಕೀ ಜೈ ಎಂದು ಜಯಘೋಷ ಕೂಗಿದರು.
ಈ ಸಂದರ್ಭದಲ್ಲಿ ಸಿದ್ದಪ್ಪ ಲೋಕುರ, ಪ್ರಶಾಂತ ತುಕ್ಕಪ್ಪನವರ, ಡಿ.ಜೆ.ಬೇವಿನಕೊಪ್ಪ, ವಿವೇಕ ಭಾಂವಿಹಾಳ ಆನಂದ ಶೆಟಗಾರ, ಉಮೇಶ ಗಂಗಪ್ಪನವರ, ಅಜ್ಜಪ್ಪ ಪರುಶೆಟ್ಟಿ, ಮಲ್ಲಿಕಾಜರ್ುನ ಇಂಗಳಗಿ, ಅರುಣ ಕೊಟೆನ್ನವವರ, ಬಸು ಗಂಗಪ್ಪನವರ, ಶಿವಾನಂದ ಶೆಟಗಾರ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 