ಅತಿಥಿ ಶಿಕ್ಷಕರ ಭರವಸೆ ಹುಸಿ ಮಾಡಿದ ಬಜೆಟ್
A historic budget for Siddaramaiah alone
ಹಾರೂಗೇರಿ 07: ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮಾತ್ರ ಐತಿಹಾಸಿಕ ಬಜೆಟ್ ಹೊರತು ಅತಿಥಿ ಶಿಕ್ಷಕರಿಗೆ ಅಲ್ಲ. ಸುಮಾರು ದಶಕಗಳ ಹೋರಾಟ ಪ್ರತಿಭಟನೆಗಳಿಗೆ ಅತಿಥಿ ಶಿಕ್ಷಕರಿಗೆ ಭದ್ರತೆ ಸಿಗುತ್ತಿಲ್ಲ. ಅತಿಥಿ ಶಿಕ್ಷಕರ ಬಾಳಿಗೆ ಬೆಳಕಾಗದೇ ಅಳುವ ಮಕ್ಕಳ ಕೈಯಲ್ಲಿ ಮಿಠಾಯಿ ನೀಡಿದಂತಿದೆ ಈ ಬಜೆಟ್.
ರಾಜ್ಯಾದ್ಯಂತ ಸುಮಾರು 43ಸಾವಿರ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಪ್ರತಿವರ್ಷ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿಗಳಷ್ಟು ಉಳಿತಾಯವಾಗುತ್ತಿದೆ. ಕನಿಷ್ಠ ಕೂಲಿಯನ್ನು ನೀಡದೇ ಅತಿಥಿ ಶಿಕ್ಷಕರ ಗೌರವ ಧನವನ್ನು ಕೇವಲ 2000ರೂ. ಹೆಚ್ಚಿಸಿ, ಸಂತೃಪ್ತಿ ಪಡಿಸುವ ಅಸಂವಿಧಾನಿಕ ಸರ್ಕಾರವಾಗಿದೆ.
ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಾಯಕರು ಅತಿಥಿ ಶಿಕ್ಷಕರ ಹೋರಾಟದಲ್ಲಿ ಭಾಗಿಯಾಗಿ, ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಅತಿಥಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲೂ ಉಲ್ಲೇಖಿಸಿದೆ. ಆದರೂ ಬಂದಿ ಖಾನೆಯಲ್ಲಿ ಬಂಧಿಯಾಗಿರುವಂತಹ ಕೈದಿಗಳಿಗೆ ನೀಡುವಂತಹ ಸಂಬಳವನ್ನು ಸಮಾಜವನ್ನು ಕಟ್ಟುವ ಶಿಕ್ಷಕನಿಗಿಲ್ಲದೇ ಹೋಗಿದೆ.
ಪ್ರದೀಪ ಮಾಳಿ - ಕಾರ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 