ಗ್ರಂಥಾಲಯವಿಲ್ಲದ ಮನೆ ಆತ್ಮವಿಲ್ಲದ ಶರೀರವಿದ್ದಂತೆ: ಡಾ. ಎ.ಎಂ. ಜಕ್ಕಣ್ಣವರ
A house without a library is like a body without a soul: Dr. A.M. Jakkannavara
ಕಾಗವಾಡ 14: ಪಟ್ಟಣದ ಶಿವಾನಂದ ಮಹಾವಿದ್ಯಾಲಯದಲ್ಲಿ ಡಾ. ಎಸ್.ಆರ್. ರಂಗನಾಥನ ಅವರ 133ನೇ ಜನ್ಮ ಜಯಂತಿಯ ಅಂಗವಾಗಿ ಆ. 12 ರಂದು ಮಹಾವಿದ್ಯಾಲಯದ ಜ್ಞಾನಯೋಗಿ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.
ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎ.ಎಂ. ಜಕ್ಕಣ್ಣವರ ಅತಿಥಿಯಾಗಿ ಮಾತನಾಡುತ್ತ, ಗ್ರಂಥಾಲಯದ ಪಂಚಸೂತ್ರಗಳನ್ನು ಪ್ರತಿಯೊಬ್ಬ ಓದುಗನು ಪಾಲಿಸಬೇಕೆಂದು ಕರೆ ನೀಡಿದರು. ಡಾ.ಎಸ್.ಆರ್.ರಂಗನಾಥನ ಅವರ ಕೊಡುಗೆಯ ಬಗ್ಗೆ ವಿವರಿಸಿದರು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಸ್.ಪಿ. ತಳವಾರ ವಹಿಸಿ, ಮಾತನಾಡುತ್ತಾ, ಮೊಬೈಲ್ ಎಂಬ ಮಾಯಾಲೋಕದಿಂದ ಹೊರಬಂದು, ಪುಸ್ತಕವನ್ನು ಓದಿ, ಜಗತ್ತನ್ನು ಅರ್ಥ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಮ್ಮ ಮಹಾವಿದ್ಯಾಲಯದಲ್ಲಿರುವ ಗ್ರಂಥಾಲಯವು ಎಲ್ಲ ಸೌಲಭ್ಯಗಳನ್ನು ಹೊಂದಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಬೇಕು ಎಂದು ಹೇಳಿದರು.
ಈ ವೇಳೆ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮೇಜರ್ ವ್ಹಿ. ಎಸ್. ತುಗಶೆಟ್ಟಿ, ಐಕ್ಯೂಎಸಿ ಸಂಯೋಜಕ ಪ್ರೊ. ಬಿ.ಡಿ. ಧಾಮಣ್ಣವರ ಗ್ರಂಥಪಾಲಕರಾದ ಪಿ.ಎಂ. ದೊಡಮನಿ, ವಿನಾಯಕ ಪರುತಗಾಲೆ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 