ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಪತ್ರ ಚಳುವಳಿ
A letter movement against the establishment of a huge steel factory
ಕೊಪ್ಪಳ 17: ಕೊಪ್ಪಳ ನಗರಕ್ಕೆ ಹೊಂದಿಕೊಂಡು ಸ್ಥಾಪನೆಯಾಗುತ್ತಿರುವ ಬಿಎಸ್ಪಿಎಲ್ ಕಂಪನಿಯ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಕೊಪ್ಪಳ ತಾಲೂಕಿಗೆ ಬಿಎಸ್ಪಿಎಲ್ ಬೃಹತ್ ಉಕ್ಕು ಕಾರ್ಖಾನೆ ಬೇಡ ಸರಕಾರದಿಂದ ಕೊಟ್ಟ ಅನುಮತಿಯನ್ನು ಈ ಕೂಡಲೇ ರದ್ದು ಮಾಡಬೇಕೆಂದು ಹಾಗೂ “ಕಾರ್ಖಾನೆ ಓಡಿಸಿ ಕೊಪ್ಪಳ ಉಳಿಸಿ” ಎಂಬ ಶಿರ್ಷಿಕೆಯಡಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿದ್ದು ನಗರದ ಪ್ರಧಾನ ಅಂಚೆ ಕಛೇರಿ ಮುಂದೆ 100 ಕ್ಕೂ ಹೆಚ್ಚು ಕಾರ್ಯಕರ್ತರು ಪತ್ರ ಬರೆದು ಮಾನ್ಯ ಮುಖ್ಯ ಮಂತ್ರಿಗಳಿಗೆ ಕಳುಹಿಸಿ ಕೊಡುವುದರ ಮೂಲಕ ಪತ್ರ ಚಳುವಳಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕರಾದ ವಿಜಯಕುಮಾರ ಕವಲೂರು, ಗೌರವ ಅಧ್ಯಕ್ಷರಾದ ಜಿಎಸ್ ಗೋನಾಳ, ವಿನೋದ ಕುಮಾರ್ ಜಿ, ಶಿವಕುಮಾರ ಏಣಗಿ, ಚಂದ್ರು ಅಣ್ಣಿಗೇರಿ, ಗವಿಸಿದ್ದಪ್ಪ ಮಂಗಳಾಪುರ, ಮಹ್ಮದ್ ಗರ್ಸಗಲ್, ವಿನೋದ ಕುಮಾರ, ಸೋಹೇಲ್, ದೇವೆಂದ್ರ್ಪ ತೋಂಡಿಹಾಳ, ಶಾಮ್ ಬೇಣಗಿ, ಹನುಮಗೌಡ ಆಟೋ, ಶಕೀಲ್ ಅಹ್ಮದ್ ಬ್ಯಾಗವಾಟ್, ಮಂಜುನಾಥ ಪಾಟೀಲ್, ಮಂಜುನಾಥ ಶಹಾಪುರ, ರಾಮಣ್ಣ ಗಾಣಿಗೇರ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 