ಕಂಪ್ಲಿ-ಕೋಟೆಯಲ್ಲಿ ರಸ್ತೆ ಬದಿ ಕಂದಕ್ಕೆ ಉರುಳಿದ ಭತ್ತ ತುಂಬಿದ ಲಾರಿ
A lorry loaded with paddy overturned on the roadside in Kampli-kote.
ಕಂಪ್ಲಿ.04: ಕಂಪ್ಲಿ-ಕೋಟೆಯ ಸುಂಕ್ಲಮ್ಮ ದೇವಸ್ಥಾನದ ಹತ್ತಿರ ನೂರಾರು ಚೀಲ ಭತ್ತ ತುಂಬಿದ್ದ ಬೃಹತ್ ಲಾರಿ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಮಂಗಳವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗಂಗಾವತಿಯಿಂದ ತಮಿಳು ನಾಡಿಗೆ ಭತ್ತವನ್ನು ತುಂಬಿಕೊಂಡು ಹೊರಟಿದ್ದ ಬೃಹತ್ ಲಾರಿ ಕೋಟೆಯ ಸುಂಕ್ಲಮ್ಮ ದೇವಸ್ಥಾನದ ಹತ್ತಿರದ ಬೃಹತ್ ಕಂದಕಕ್ಕೆ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಇಲ್ಲಿ ರಸ್ತೆ ಸ್ವಲ್ಪ ಕಿರಿದಾಗಿರುವುದರ ಜೊತೆಗೆ ರಸ್ತೆಯ ಕೆಳಗೆ ಹಳ್ಳವಿದ್ದು, ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಕಿರಿದಾಗಿರುವ ಕಾರಣ ಎದುರಿಗೆ ಬರುವ ವಾಹನಗಳಿಗೆ ಮಾರ್ಗ ಬಿಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳದ ಕಂದಕಕ್ಕೆ ಉರುಳಿದೆ.
ಆದರೆ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಬೃಹತ್ ಲಾರಿಯಲ್ಲಿದ್ದ ಸುಮಾರು 400 ಚೀಲ ಭತ್ತ ಕಂದಕಕ್ಕೆ ಬಿದ್ದಿದ್ದು, ಇದರಲ್ಲಿ ಸುಮಾರು ನೂರಕ್ಕ ಅಧಿಕ ಚೀಲ ಭತ್ತ ನೀರಲ್ಲಿ ಬಿದ್ದು, ಲಕ್ಷಾಂತರ ರೂಗಳ ನಷ್ಟ ಸಂಭವಿಸಿದೆ. ಬೃಹತ್ ಲಾರಿ ಕಂದಕಕ್ಕೆ ಉರುಳಿದ ಪರಿಣಾಮ ಕೆಲವು ಸಮಯ ಗಂಗಾವತಿ ಕಂಪ್ಲಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 