ವಿವಾಹಿತ ಮಹಿಳೆ ನೇಣಿಗೆ ಶರಣು
A married woman commits suicide
ಕಾಗವಾಡ 10: ಅತ್ತೆ, ಗಂಡನ ಮಾನಸಿಕ ಹಿಂಸೆಯಿಂದ ಧನಶ್ರೀ ಚೇತನ ಮಹಲದಾರ (23) ವಿವಾಹಿತ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ವ್ಯಾಪ್ತಿಯ ಮಂಗಸೂಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಧನಶ್ರೀ ತವರು ಮನೆ ನೆರೆಯ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಕೌಟೆಸಾರ ಗ್ರಾಮವಾಗಿದ್ದು ಕಳೆದ ಮೂರು ವರ್ಷಗಳ ಹಿಂದೆ ಚೇತನ ಮಹಲದಾರ ಇತನಿಗೆ ಮದುವೆ ಮಾಡಿ ಕೊಡಲಾಗಿದ್ದು ಒಂದು ವರೆ ವರ್ಷ ವಯಸ್ಸಿನ ಮಗನಿದ್ದಾನೆ. ಪತಿ ಚೇತನ ಹಾಗೂ ಅತ್ತೆ ಪದೆ ಪದೇ ಮಾನಸಿಕ ಹಿಂಸೆ ನೀಡುತ್ತಿದ್ದರು. ನನ್ನ ಮಗಳು ಎಂಎಸ್ಸಿ ಪದವೀಧರೆಯಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಅಂತಹವಳು ಅಲ್ಲಾ ನಮಗೆ ನ್ಯಾಯ ಬೇಕು ಎಂದು ಧನಶ್ರೀ ತಾಯಿ ಶೋಭಾ ಸಿದ್ದಗೌಡ ಪಾಟೀಲ, ತಂದೆ ಸಿದಗೌಡ ಪಾಟೀಲ ಹಾಗೂ ತಮ್ಮ ಧೀರಜ ಪಾಟೀಲ, ಆರೋಪಿಸಿದ್ದಾರೆ.
ಈ ಕುರಿತು ಕಾಗವಾಡ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಜಿ ಜಿ ಬಿರಾದರ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 