ಬ್ಯಾಡಗಿಯಲ್ಲಿ ಎಸಿಬಿಯಿಂದ ಜನಸಂಪರ್ಕ ಸಭೆ
ಹಾವೇರಿ08: ಹಾವೇರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದಿಂದ ಬ್ಯಾಡಗಿ ತಾಲೂಕಾ ಕಛೇರಿಯ ಸಭಾಂಗಣದಲ್ಲಿ ಮಂಗಳವಾರ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕ ಅಹವಾಲು ಕಾರ್ಯಕ್ರಮ ಜರುಗಿತು.
ಈ ಜನಸಂಪರ್ಕ ಸಭೆಯಲ್ಲಿ ಇಲಾಖೆಯ ಮೇಲಧಿಕಾರಿಗಳು ಹಾಗೂ ಡಿಎಸ್ಪಿ ಎಸಿಬಿ ರವರು ಇಲಾಖೆಯ ಮಹತ್ವದ ಕಾರ್ಯಚಟುವಟಿಕೆಯನ್ನು ವಿವರಿಸಿದರು.
ಸಂಸತ್ತಿನಲ್ಲಿ ಅನುಮೋದನೆಗೊಂಡ ಲಂಚ ತೆಗೆದುಕೊಳ್ಳುವುದು ಶಿಕ್ಷಾರ್ಹ ಅಪರಾದ ಇದರ ಬಗ್ಗೆ ಅರಿವನ್ನು ಮೂಡಿಸಿದರು. ಸುಮಾರು 10 ಕ್ಕಿಂತ ಹೆಚ್ಚು ಜನ ರೈತರು ಮೌಖಿಕವಾಗಿ, ಬರವಣಿಗೆಯಲ್ಲಿ ದೂರುಗಳನ್ನು ಸಲ್ಲಿಸಿದರು. ಕೆಲವೊಂದು ಅಹವಾಲುಗಳನ್ನು ಸಭೆಯಲ್ಲಿ ಹಾಜರಿದ್ದ ತಹಶಿಲ್ದಾರ, ಮತ್ತು ಸವರ್ೇ ಇಲಾಖೆಯವರು ರೈತರ ಅಹವಾಲುಗಳಿಗೆ ಉತ್ತರ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಈ ರೀತಿ ಕಾರ್ಯಕ್ರಮವನ್ನು ಎಲ್ಲಾ ತಾಲೂಕುಗಳಲ್ಲಿ ಹಮ್ಮಿಕೊಂಡು ಸಾರ್ವಜನಿಕ ಅಹವಾಲುಗಳನ್ನು ಸ್ವೀಕಾರ ಮಾಡಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಸುವುದಾಗಿ ಡಿಎಸ್ಪಿ ಅವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 