ಗ್ರಾಮ ಸಹಾಯಕ ಪದಾಧಿಕಾರಿಗಳ ಸಭೆ
ಲೋಕದರ್ಶನ ವರದಿ
ಬೈಲಹೊಂಗಲ 04: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರನ್ನು 'ಡಿ' ದರ್ಜೆ ನೌಕರರನ್ನಾಗಿ ಪರಿಗಣಿಸಲು ಸರಕಾರವನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಸಹಾಯಕರ ಸಂಘದ ವತಿಯಿಂದ ಉಗ್ರವಾದ ಹೋರಾಟವನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮಹಾದೇವಪ್ಪ ಇಂಗಳಗಿ ಹೇಳಿದರು.
ಅವರು ಸಮೀಪದ ಸೊಗಲಕ್ಷೇತ್ರದಲ್ಲಿ ಭಾನುವಾರ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆದ ಸವದತ್ತಿ ತಾಲೂಕಿನ ಗ್ರಾಮ ಸಹಾಯಕರ ಪದಾಧಿಕಾರಿಗಳ ಆಯ್ಕೆ ಮಾಡಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಗ್ರಾಮ ಸಹಾಯಕ ಹುದ್ದೆಯನ್ನು 'ಡಿ' ದರ್ಜೆ ಮಾಡುವರೆಗೆ ಹೋರಾಟ ಮಾಡುವುದೇ ನಮ್ಮ ಗುರಿ ಎಂದರು.
ರಾಜ್ಯ ಸಂಘದ ಉಪಾಧ್ಯಕ್ಷ ಮಡಿವಾಳಪ್ಪ ವಣ್ಣೂರ ಮಾತನಾಡಿ, ಈ ಹೋರಾಟಕ್ಕೆ ರಾಜ್ಯ ಪೂರ್ವಭಾವಿ ಸಭೆಯಲ್ಲಿ ಕೈಕೊಂಡ ನಿರ್ಣಯದಂತೆ ರಾಜ್ಯದ ಸುಮಾರು 10450 ಗ್ರಾಮ ಸಹಾಯಕರು ಭಾಗವಹಿಸಲಿದ್ದಾರೆ ಎಂದರು. ಸವದತ್ತಿ ತಾಲೂಕಿನ ಗ್ರಾಮ ಸಹಾಯಕರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಡಿವಾಳಪ್ಪ ವಣ್ಣೂರ ಸ್ವಾಗತಿಸಿ, ನಿರೂಪಿಸಿದರು. ಹಜರತಶೇಖ ಸನದಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 