ರಸ್ತೆ ಮೇಲೆ ಸಂಚರಿಸುತ್ತಿದ್ದ ಜನರ ಮೇಲೆ ಉಗುಳಿದ ಮಾನಸಿಕ ಅಸ್ವಸ್ಥ
ಕಲಬುರಗಿ, ಏ.13, ರಸ್ತೆ ಮೇಲೆ ಸಂಚರಿಸುತ್ತಿದ್ದ ಜನರ ಮೇಲೆ ಉಗುಳಿದ ವ್ಯಕ್ತಿ ಯೋರ್ವ ವಿಕೃತ ಮೆರೆದಿರುವ ಘಟನೆ ನಗರದ ಧನ್ವಂತರಿ ಆಸ್ಪತ್ರೆ ಬಳಿ ರವಿವಾರ ರಾತ್ರಿ ನಡೆದಿದೆ.ವಿಕೃತಿ ಮೆರೆದಾತ ಆಳಂದ ತಾಲೂಕಿನ ವಿ.ಕೆ.ಸಲಗರ ಗ್ರಾಮದ ರಬ್ಬಾನಿ ಎಂದು ಗುರುತಿಸಲಾಗಿದೆ.ಕೊರೊನಾ ಭೀತಿ ಹಿನ್ನೆಲೆಯಲ್ಲಿ ವಿಕೃತ ವ್ಯಕ್ತಿಯ ಕೃತ್ಯ ಕಂಡು ಬಡಾವಣೆಯ ಜನರಲ್ಲಿ ಕೆಲ ಕಾಲ ಆತಂಕಮೂಡಿದ್ದು, ತಕ್ಷಣವೇ ಅವರು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ವಿಕೃತ ರಬ್ಬಾನಿಯನ್ನು ವಶಕ್ಕೆ ಪಡೆದಿದ್ದಾರೆ.ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ಪದೇ ಪದೇ ಆತ ಹೇಳಿಕೆಗಳನ್ನು ಬದಲಿಸಿದ್ದ ಎಂದು ತಿಳಿದು ಬಂದಿದೆ.ತಕ್ಷಣವೇ ಆತನನ್ನು ತಪಾಸಣೆಗಾಗಿ ಕಲಬುರಗಿಯ ಜೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸ್ಥಳಕ್ಕೆ ವಿಕೃತನ ತಂಗಿ ಆಗಮಿಸಿ, ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎಂದು ತಿಳಿದು ಬಂದಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 