ರಸ್ತೆ ಮೇಲೆ ಸಂಚರಿಸುತ್ತಿದ್ದ ಜನರ ಮೇಲೆ ಉಗುಳಿದ ಮಾನಸಿಕ ಅಸ್ವಸ್ಥ
ಕಲಬುರಗಿ, ಏ.13, ರಸ್ತೆ ಮೇಲೆ ಸಂಚರಿಸುತ್ತಿದ್ದ ಜನರ ಮೇಲೆ ಉಗುಳಿದ ವ್ಯಕ್ತಿ ಯೋರ್ವ ವಿಕೃತ ಮೆರೆದಿರುವ ಘಟನೆ ನಗರದ ಧನ್ವಂತರಿ ಆಸ್ಪತ್ರೆ ಬಳಿ ರವಿವಾರ ರಾತ್ರಿ ನಡೆದಿದೆ.ವಿಕೃತಿ ಮೆರೆದಾತ ಆಳಂದ ತಾಲೂಕಿನ ವಿ.ಕೆ.ಸಲಗರ ಗ್ರಾಮದ ರಬ್ಬಾನಿ ಎಂದು ಗುರುತಿಸಲಾಗಿದೆ.ಕೊರೊನಾ ಭೀತಿ ಹಿನ್ನೆಲೆಯಲ್ಲಿ ವಿಕೃತ ವ್ಯಕ್ತಿಯ ಕೃತ್ಯ ಕಂಡು ಬಡಾವಣೆಯ ಜನರಲ್ಲಿ ಕೆಲ ಕಾಲ ಆತಂಕಮೂಡಿದ್ದು, ತಕ್ಷಣವೇ ಅವರು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ವಿಕೃತ ರಬ್ಬಾನಿಯನ್ನು ವಶಕ್ಕೆ ಪಡೆದಿದ್ದಾರೆ.ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ಪದೇ ಪದೇ ಆತ ಹೇಳಿಕೆಗಳನ್ನು ಬದಲಿಸಿದ್ದ ಎಂದು ತಿಳಿದು ಬಂದಿದೆ.ತಕ್ಷಣವೇ ಆತನನ್ನು ತಪಾಸಣೆಗಾಗಿ ಕಲಬುರಗಿಯ ಜೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸ್ಥಳಕ್ಕೆ ವಿಕೃತನ ತಂಗಿ ಆಗಮಿಸಿ, ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 