ವಿಶ್ವ ಮಾನವ ಕುವೆಂಪು ಸರ್ವರಿಗೂ ಮಾದರಿ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
ಗದಗ 18 : ಕುವೆಂಪು ಒಬ್ಬ ಶ್ರೇಷ್ಟ ಕವಿ. ರಾಷ್ಟ್ರಕವಿಯಾಗಿ, ವಿಶ್ವಮಾನವರಾಗಿ ಬೆಳೆದ ಅವರ ಜೀವನ ಎಲ್ಲರಿಗೂ ಮಾದರಿ. ಅವರ ಸಾಹಿತ್ಯವನ್ನು ಎಲ್ಲರೂ ಓದಿ ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಅವರ ದಿನಾಚರಣೆ ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ನುಡಿದರು.
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ ರಾಷ್ಟ್ರ ಕವಿ ಕುವೆಂಪು ಜನ್ಮದಿನದ ನಿಮಿತ್ಯ ವಿಶ್ವ ಮಾನವ ದಿನಾಚರಣೆ ಸಮಾರಂಭದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.
ಡಾ. ರಾಮಚಂದ್ರ ಹಂಸನೂರ ಅವರು ಉಪನ್ಯಾಸ ನೀಡಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರು 1904 ಡಿಸೆಂಬರ್ 29 ರಂದು ಕುಪ್ಪಳ್ಳಿಯಲ್ಲಿ ಜನಿಸಿದರು. ಕನ್ನಡ ಕಾವ್ಯ, ಮಹಾಕಾವ್ಯ ಗದ್ಯ, ಕಥನ ಕವನ, ಮಕ್ಕಳ ಸಾಹಿತ್ಯ, ಕಾದಂಬರಿ , ಸಣ್ಣ ಕತೆ , ನಾಟಕ, ವಿಮರ್ಶ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನ ಸಂದೇಶವನ್ನು ರೂಢಿಸಿಕೊಂಡಲ್ಲಿ ಅದುವೇ ನಾವು ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವವಾಗಿದೆ ಎಂದರು.
ಹಿರಿಯ ಸಾಹಿತಿ ಡಿ.ವಿ. ಬಡಿಗೇರ ಕಾವ್ಯವಾಚನ ಮಾಡಿದರು. ವೆಂಕಟೇಶ ಕುಲಕರ್ಣಿ ಸುಗಮಸಂಗೀತ ಪ್ರಸ್ತುತಪಡಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಐ.ಕೆ, ಕಮ್ಮಾರ್ , ಮೌನೇಶ ಬಡಿಗೇರ, ಸಾಹಿತಿಗಳು, ಕವಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಸಮಾರಂಭದಲ್ಲಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ವೀರಯ್ಯಸ್ವಾಮಿ ಬಿ ಸರ್ವರನ್ನು ಸ್ವಾಗತಿಸಿದರು. ಕುಮಾರಿ ಮಂಜರಿ ಹೊಂಬಾಳಿ ನಿರೂಪಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 