ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ
ಗುಳೇದಗುಡ್ಡ09: ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಅಡಗಿರುತ್ತದೆ. ಅದರ ಅನಾವರಣಕ್ಕೆ ವೇದಿಕೆ ಬೇಕು. ಅಂತಹ ವೇದಿಕೆಗಳು ಅವರಿಗೆ ಶಾಲಾ ವಾಷರ್ಿಕೋತ್ಸವದಲ್ಲಿ ಸಿಗುತ್ತವೆ ಎಂದು ಬಸವನ ಬಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು.
ಅವರು ಶನಿವಾರ ಇಲ್ಲಿನ ನೆಹರು ಇಂಟರ್ ನ್ಯಾಷನಲ್ ಶಾಲೆಯ ವಾಷರ್ಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಸಿಗಬೇಕು. ನಂತರ ಶಾಲೆಗಳ ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ. ಇಂದಿನ ಮಕ್ಕಳಲ್ಲಿ ದೇಶದ ಭವಿಷ್ಯವೇ ಅಡಗಿದೆ. ಮಕ್ಕಳಿಗೆ ಜೀವನ ಶಿಕ್ಷಣದ ಅಗತ್ಯವಿದೆ. ಅವರಿಗೆ ಅಧ್ಯಯನದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೂ ಶಾಲೆಗಳು ಪ್ರೋತ್ಸಾಹ ನೀಡಬೇಕೆಂದರು.
ಜಿಲ್ಲಾ ಎಸ್ಪಿ ಲೋಕೇಶ್ ಜಗಲಸಕರ್, ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಸಹಾಯಕ ನಿದರ್ೇಶಕ ಶ್ರೀಶೈಲ್ ಕಂಕಣವಾಡಿ, ಚಲನಚಿತ್ರ ನಟಿ ಅನಿತಾಭಟ್, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ್ ಮಾತನಾಡಿದರು. ಮಾಜಿ ಸಚಿವ ಹೆಚ್.ವೈ.ಮೇಟಿ ಅಧ್ಯಕ್ಷತೆವಹಿಸಿ ಮಾತನಾಡಿರು. ಅಧ್ಯಕ್ಷ ಎಂ.ಎಸ್. ಸರ್ಗಣಾಚಾರ್, ಉಪಾಧ್ಯಕ್ಷ ವಿರೇಶ್ ಚಿಂದಿ, ಪ್ರಾಚಾರ್ಯ ಸಾಯಿ ಕೃಷ್ಣ ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 