ಬಸ್ಸಿನ ಸೌಲಭ್ಯಕ್ಕಾಗಿ ಜುಗೂಳ ಗ್ರಾಮಸ್ಥರಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಜು ಕಾಗೆಗೆ ಮನವಿ
ಜುಗೂಳ ಗ್ರಾಮಸ್ಥರು ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಶಾಸಕ ರಾಜು ಕಾಗೆ ಅವರಿಗೆ ಮನವಿ ಸಲ್ಲಿಸುತ್ತಿರುವ ಚಿತ್ರ.
ಬಸ್ಸಿನ ಸೌಲಭ್ಯಕ್ಕಾಗಿ ಜುಗೂಳ ಗ್ರಾಮಸ್ಥರಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಜು ಕಾಗೆಗೆ ಮನವಿ
ಕಾಗವಾಡ 25 : ತಾಲೂಕಿನ ಜುಗೂಳ ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸರಿಯಾದ ಸಮಯಕ್ಕೆ ಬಸ್ಸಿನ ಸೌಲಭ್ಯ ಇಲ್ಲದಿರುವುದರಿಂದ ಕೂಡಲೇ ಗ್ರಾಮಕ್ಕೆ ಬಸ್ಗಳನ್ನು ಬಿಡಿಸಬೇಕೆಂದು ಜುಗೂಳ ಗ್ರಾಮಸ್ಥರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ರಾಜು ಕಾಗೆ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ರಾಜು ಕಾಗೆ ಸ್ಥಳದಲ್ಲಿಯೇ ರಸ್ತೆ ನಿಗಮದ ಅಧಿಕಾರಿಗಳಿಗೆ ಫೋನ್ ಮುಖಾಂತರ ಮಾತನಾಡಿ, ಜುಗೂಳ ಗ್ರಾಮಕ್ಕೆ ಸಮರ್ಕ ಬಸ್ ಸೇವೆ ಮತ್ತು ವಸತಿ ಬಸ್ಗಳನ್ನು ಬಿಡಬೇಕೆಂದು ಸೂಚಿಸಿದರು.
ರವಿವಾರ ದಿ. 24 ರಂದು ಸವಳು-ಜವಳು ಯೋಜನೆಯ ಕಾಮಗಾರಿಗೆ ಚಾಲನೆಯ ವೇಳೆ ಗ್ರಾಮದ ಅಭಯ ಶಹಾ ಈ ಕುರಿತು ಮನವಿ ಸಲ್ಲಿಸಿದ್ದರು. ಅದಕ್ಕೆ ಅವರು ಅಲ್ಲಿಯೇ ಪರಿಹಾರ ನೀಡಿ, ಬಸ್ ಸೇವೆ ಒದಗಿಸುವ ಭರಸವೆ ನೀಡಿದರು.ಈ ಸಮಯದಲ್ಲಿ ಮುಖಂಡರಾದ ಅಣ್ಣಾಸಾಬ ಪಾಟೀಲ, ಕಾಕಾಸಾಬ ಪಾಟೀಲ, ಉಮೇಶ ಪಾಟೀಲ, ರಾಜು ಕಡೋಲೆ, ಅನೀಲ ಕಡೋಲೆ, ಸುರೇಶ ಪಾಟೀಲ, ಬಾಬಾಸಾಬ ತಾರದಾಳೆ ಅವಿನಾಶ ಪಾಟೀಲ, ನೀತೀನ ಪಾಟೀಲ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಗೂಳ ಗ್ರಾಮಸ್ಥರು ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಶಾಸಕ ರಾಜು ಕಾಗೆ ಅವರಿಗೆ ಮನವಿ ಸಲ್ಲಿಸುತ್ತಿರುವ ಚಿತ್ರ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 