ರಕ್ತದಾನಕ್ಕೆ ಸೇವಾ ಮನೋಭಾವನೆ ಅವಶ್ಯ
A spirit of service is essential for blood donation....
ಹೂವಿನಹಡಗಲಿ 14 : ಅಪಘಾತದಿಂದ ಸಂಕಷ್ಟದಲ್ಲಿರುವವರ ಜೀವ ಉಳಿಸುವ ಉದ್ದೇಶದಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಕಾರ್ಯ ಶ್ಲಾಘನಿಯವಾಗಿದ್ದು, ಅದಕ್ಕಾಗಿ ಸೇವಾ ಮನೋಭಾವನೆ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಪ್ರಾಚಾರ್ಯರಾದ ಎಸ್.ಎಸ್.ಪಾಟೀಲ ಹೇಳಿದರು.
ಪಟ್ಟಣದ ಜಿಬಿಆರ್ ಪದವಿ ಕಾಲೇಜು ಹಾಗೂ ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ರಕ್ತದಾನ ಶಿಬಿರದಲ್ಲಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಕ್ತದಾನ ಮಾಡಿದರು
ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ವ್ಯವಸ್ಥಾಪಕ ಗೋಪಾಲರೆಡ್ಡಿ, ಐಕ್ಯೂಎಸಿ ಸಂಯೋಜಕಿ ಡಾ.ಮಹಿಮಾ ಜ್ಯೋತಿ, ಎನ್ಎಸ್ಎಸ್ ಘಟಕಾದಿಕಾರಿಗಳಾದ ಡಾ.ಶರಣಪ್ಪ, ಮಾಬುಸಾಬ್, ಪ್ರಿಯಾಂಕ್, ದೈಹಿಕ ನಿರ್ದೇಶಕ ಬಡೆಸಾಬ್ನಾಯಕ, ಸಹಾಯಕ ಪ್ರಾಧ್ಯಾಪಕರಾದ ಹರ್ಷ, ಸಂಜಯ್, ಚೈತ್ರ, ಕುಸುವ, ವೀಣಾ, ಅನ್ನದಾನಪ್ಪ ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 