ಜುಲೈ 8 ರಂದು ಜಿಲ್ಲಾ ಕಾರಾಗೃಹದಲ್ಲಿ ಪಯಣ ತಂಡದಿಂದ ತಲ್ಕಿ ನಾಟಕ ಪ್ರದರ್ಶನ
A talkie play at the District Jail on 8th July
ಗದಗ 7: ರಾಜ್ಯದ ತುಂಬ ಪಯಣ ಸಂಸ್ಥೆ ಆಯೋಜಿಸುವ ತಲ್ಕಿ ನಾಟಕವನ್ನು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಜಿಲ್ಲಾ ಕಾರಾಗೃಹ ಗದಗ, ನಿರ್ಮಲ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಮುಂಡರಗಿ ಹಾಗೂ ಸೃಷ್ಠಿ ಸಂಕುಲ ಸಂಸ್ಥೆ ಗದಗ, ನವರಸ ಕಲಾಸಂಘ ಬೆಟಗೇರಿ ಇವುಗಳ ಸಹಯೋಗದಲ್ಲಿ ಜುಲೈ 8 ರಂದು ನಗರದ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಗೊಟಗೂಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಹಾಯಕ ಕುಲಸಚಿವ ಶಹಜಹಾನ ಮುದಕವಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಈರಣ್ಣ ರಂಗಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ. ಎಸ್.ಮಕಾನದಾರ, ಮುಂಡರಗಿಯ ಚಂದ್ರು ನಾವಿ ಭಾಗವಹಿಸಲಿದ್ದಾರೆ. ಸಿಂಧನೂರಿನ ಪಲ್ಲವಿ, ಬೆಂಗಳೂರಿನ ಪಯಣ ಸಂಸ್ಥೆಯ ನಿರ್ದೇಶಕಿ ಚಾಂದಿನಿ, ನಿರ್ಮಲಾ ತರವಾಡೆ, ಆದಿತ್ಯ ಬಾಂಡಗೆ, ಬಸವರಾಜ ನೆಲಜೇರಿ , ಗಣೇಶ ಮೇರವಾಡೆ, ಸವಿತಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜೈಲರ್ ಸುನಂದಾ ಈರಬಾಯಿಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 