ಶಾಲೆಗೆ ಬಂದ ಶಿಕ್ಷಕ ಹೃದಯಾಘಾತದಿಂದ ಸಾವು
A teacher who came to school died of heart attack
ಶಾಲೆಗೆ ಬಂದ ಶಿಕ್ಷಕ ಹೃದಯಾಘಾತದಿಂದ ಸಾವು
ಕಾಗವಾಡ 28: ಶಾಲೆಗೆ ಪಾಠ ಮಾಡಲು ಬಂದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಘಟನೆ ತಾಲೂಕಿನ ಮಂಗಸೂಳಿ ಗ್ರಾಮದ ಸರಕಾರಿ ಎಮ್ ಆರ್ ಎಮ್ ಕೆ ಪಿ ಎಸ್ ಪ್ರೌಢ ಶಾಲೆಯಲ್ಲಿ ಗುರುವಾರ ನಡೆದಿದೆ.
ಶಾಲೆಯ ಸಮಾಜ-ವಿಜ್ಞಾನ ಶಿಕ್ಷಕ ಭರತ ಶಿಂದೆ (47) ಬೆಳಿಗ್ಗೆ ಶಾಲಾ ಆವರಣಕ್ಕೆ ಬರುತ್ತಲೇ ಎದೆ ನೋವು ಕಾಣಿಸಿಕೊಂಡಿದೆ. ಶಾಲೆಯ ಇನ್ನುಳಿದ ಶಿಕ್ಷಕರು ಅವರನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಶಿಕ್ಷಕ ಮೂಲತಃ ರಾಯಬಾಗ ತಾಲೂಕಿನ ಬಿರಡಿ ಗ್ರಾಮದವರಾಗಿದ್ದು ಈ ಮೊದಲು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುಂಬಡ್ತಿ ಪಡೆದು ಪ್ರೌಢ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 