ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪುರಸ್ಕೃತ ವೀರಣ್ಣ ಪವಾಡದವರ ಸನ್ಮಾನ
A tribute to Veeranna Pavadava who received the Greatest Entrepreneur award
ಲಕ್ಷ್ಮೇಶ್ವರ, ಆ.17: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಹಾಗೂ ಸಣ್ಣ ಉದ್ಯಮ ವಿಭಾಗ ಮತ್ತು ಗದಗ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಡೆದ ‘ಗದಗ ಉತ್ಸವ-2026’ ಸಮಾರಂಭದಲ್ಲಿ ಶಿಗ್ಲಿ ಗ್ರಾಮದ ಹಿರಿಯ ಉದ್ಯಮಿ ವೀರಣ್ಣ ಪವಾಡದವರಿಗೆ ‘ಶ್ರೇಷ್ಠ ಉದ್ಯಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಈ ಹಿನ್ನೆಲೆಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಬೆಂಬಲಿಗರೊಂದಿಗೆ ಶಿಗ್ಲಿ ಗ್ರಾಮಕ್ಕೆ ತೆರಳಿ ವೀರಣ್ಣ ಪವಾಡದವರ ನಿವಾಸದಲ್ಲಿ ಅವರನ್ನು ಹಾಗೂ ಅವರ ಪತ್ನಿ ನಿರ್ಮಲಾದೇವಿ ಅವರನ್ನು ಶಾಲು ಹೊದಿಸಿ, ಫಲ-ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಗ್ರಾಮೀಣ ಭಾಗದಲ್ಲಿ ಉದ್ಯಮ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ವೀರಣ್ಣ ಪವಾಡದವರಿಗೆ ಪ್ರಶಸ್ತಿ ನೀಡಿರುವುದು ಶಿಗ್ಲಿ ಗ್ರಾಮದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 