ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿದ ಪತ್ನಿ

ಉಡುಪಿ 25: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಹತ್ಯೆ ಮಾಡಿದ್ದಾಳೆ.

 ಕೆಲವು ದಿನಗಳಿಂದ ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದ ಬಾಲಕೃಷ್ಣ ಅವರು ಜಾಂಡೀಸ್‌ನಿಂದ ಬಳಲುತ್ತಿರುವ ಶಂಕೆಯ ಹಿನ್ನೆಲೆಯಲ್ಲಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಬೆಂಗಳೂರಿನ ಕೆಎಂಸಿ ಆಸ್ಪತ್ರೆ, ನಿಮ್ಹಾನ್ಸ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ನಂತರ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಕ್ಟೋಬರ್ 20 ರಂದು ಕೊನೆಯುಸಿರೆಳೆದರು.

ಈ ನಡುವೆ ಮೃತರ ಸಹೋದರ ಅಜೆಕಾರ್ ಪೊಲೀಸ್ ಠಾಣೆಯಲ್ಲಿ ಸಾವಿನ ಕಾರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ. ಪ್ರತಿಮಾ ಮತ್ತು ದಿಲೀಪ್ ಹೆಗ್ಡೆ ಅವರ ಹೆಸರನ್ನೂ ದೂರಿನಲ್ಲಿ ದಾಖಲಿಸಿದ್ದರು. ಆಕೆಯ ಸಹೋದರ ತನ್ನ ಮೇಲೆ ಒತ್ತಡ ಹೇರಿದಾಗ ಪ್ರತಿಮಾ ಸತ್ಯವನ್ನು ಬಹಿರಂಗಪಡಿಸಿದ್ದಾಳೆ.

ತನ್ನ ಗಂಡನ ಆಹಾರದಲ್ಲಿ ವಿಷ ಹಾಕಿದ್ದಾಗಿ ಮತ್ತು ದಿಲೀಪ್ ತನಗೆ ಸ್ಲೋ ಪಾಯ್ಸನ್ನು ನೀಡಿದ್ದಾಗಿ ಆಕೆ ಬಹಿರಂಗಪಡಿಸಿದ್ದಾಳೆ. ತನ್ನ ಪತಿ ನಂತರ ಅನಾರೋಗ್ಯಕ್ಕೆ ಒಳಗಾದರು ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ದಿಲೀಪ್ ಹೆಗ್ಡೆ ಮತ್ತು ಪ್ರತಿಮಾ ನಡುವೆ ಪರಿಚವಾಗಿತ್ತು.