ಮಹಿಳೆ ನಾಲ್ಕು ಗೋಡೆಗೆ ಮಾತ್ರ ಸೀಮಿತವಲ್ಲ: ಸವಿತಾ ತಿಮ್ಮಣ್ಣವರ್
A woman is not confined to four walls: Savitha Thimmannavar
ರಾಣೇಬೆನ್ನೂರು 10: ಮಹಿಳೆ ನಾಲ್ಕು ಗೋಡೆಗೆ ಮಾತ್ರ ಸೀಮಿತವಾಗಿರದೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಇನ್ನಿತರ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗೌರವಿಸಲು ಹಾಗೂ ಇತರರಿಗೆ ಮಾದರಿಯಾಗಲು ಈ ಮಹಿಳಾ ದಿನಾಚರಣೆ ಸಹಕಾರಿಯಾಗಿದೆ ಎಂದು ಬೆಂಗಳೂರಿನ ಅಮೆರೈಸ್ಡ್ ಇಂಡಿಯಾ ಪ್ರವೈಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕಿ ಸವಿತಾ ತಿಮ್ಮಣ್ಣವರ ಹೇಳಿದರು.
ಅವರು, ನಗರ ಹೊರ ವಲಯದ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ , ಮಾತನಾಡಿದರು. ಸಮಾನತೆ, ನ್ಯಾಯ ಹಾಗೂ ಸ್ವಾತಂತ್ರ್ಯದ ಅಚಲವಾದ ಹೋರಾಟದ ಪ್ರತೀಕವಾಗಿ ಈ ದಿನವನ್ನು ಆಚರಿಸ ಲಾಗುತ್ತಿದ್ದು ಮಹಿಳೆಯರು ಇತಿಹಾಸದ ಪರಿಕಲ್ಪನೆಯನ್ನು ಅರ್ಥ ಮಾಡಿಕೊಂಡು ಸಮಾನತೆ ಸಾಧಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾ ವಿದ್ಯಾಲಯದ ಪ್ರಾಚಾರ್ಯ, ಡಾ.ಎಸ್.ಜಿ.ಮಾಕನೂರು ಪ್ರತಿದಿನವೂ ಸಮಾಜದಲ್ಲಿ ಬದಲಾವಣೆ ತರುವ ತಾಯಂದಿರು, ಹೆಣ್ಮಕ್ಕಳು, ಅಕ್ಕತಂಗಿಯರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇವೆ ಎಂದು ತಿಳಿಸಿದರು.
ಮಹಿಳಾ ದಿನಾಚರಣೆ ಅಂಗವಾಗಿ ಏರಿ್ಡಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ವಿಚಾರಿಸಲಾಯಿತು ಪ್ರೊ.ಸ್ನೇಹ ಪಾಟೀಲ್ ಅತಿಥಿಗಳನ್ನು ಪರಿಚಸಿಯಿದರು. ಪ್ರೊ. ಸಿ.ಎಂ.ಶ್ವೇತಾ ಸ್ವಾಗತಿಸಿ, ಪ್ರೊ, ಪುಷ್ಪ ತೆಂಬದ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾವನಾ ಪಾಟೀಲ್, ಪ್ರೊ, ಹೆಚ್. ಸವಿತಾ ನಿರೂಪಿಸಿ, ಪ್ರೊ.ಅನುಷಾ ಹಿರೇಮಠ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 