ಬೆಂಗಳೂರಿನಲ್ಲಿ ಅಪಘಾತವೊಂದರಲ್ಲಿ ಮೃತಪಟ್ಟ ಯುವತಿ; ನೇತ್ರ ದಾನ ಮಾಡಿ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ ಕುಟುಂಬ
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ.
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 