ಬೆಂಗಳೂರಿನಲ್ಲಿ ಅಪಘಾತವೊಂದರಲ್ಲಿ ಮೃತಪಟ್ಟ ಯುವತಿ; ನೇತ್ರ ದಾನ ಮಾಡಿ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ ಕುಟುಂಬ
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ.
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 