ತನ್ನ ಕುಟುಂಬಕ್ಕಾಗಿ ದುಡಿಯುವವನೇ ಕಾರ್ಮಿಕ : ಚಂದ್ರಶೇಖರ ಬುರಾಣಪುರ
A worker is one who works for his family: Chandrashekar Buranapura
ವಿಜಯಪುರ 06: ತನ್ನ ನೆಮ್ಮದಿಯ ಜೀವನವನ್ನು ತೊರೆದು, ತನ್ನ ಕುಟುಂಬಕ್ಕಾಗಿ ತನ್ನ ಸರ್ವಸ್ವವನ್ನೇ ಮುಡಿಪಾಗಿಟ್ಟುಕೊಂಡು ಯಾವುದೇ ವಂಚನೆ ಮೋಸ ಮಾಡದೇ ಮಳೆ, ಗಾಳಿ, ಬಿಸಿಲು ಇವೆಲ್ಲವನ್ನು ಲೆಕ್ಕಿಸದೇ ಬೆವರಿನೊಂದಿಗೆ ದುಡಿಯುವ ಇಳಿವಯಸ್ಸಿನ ಕಾರ್ಮಿಕರಾದ ಮೂರು ಚಕ್ರದ ಸೈಕಲ್ ಸವಾರರಾದ ಚಂದ್ರು ಹುಚ್ಚಪ್ಪ ಪೂಜಾರಿ ಇಂದಿನ ಯುವಕರಿಗೆ ಸ್ಪೂರ್ತಿ ಯಾಗಿದ್ದಾರೆ ಎಂದು ಚಂದ್ರಶೇಖರ ಬುರಾಣಪುರ ಹೇಳಿದರು.ಅವರು ಮುದ್ರಣ ಕಾರ್ಮಿಕ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡ ಸಂದರ್ಭದಲ್ಲಿ ಮಾತನಾಡಿದರು.
ಇಂದಿನ ಯುಗದಲ್ಲಿ ಯುವಕರು ಮೊಬೈಲ್ ಗೆ ಅಂಟಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ಜೀವನ ಸಾಗಿಸುವುದು ದುಬಾರಿಯಾಗಿದೆ. ಅಪ್ಪನ ಆದಾಯಕ್ಕೆ ಅಂಟಿಕೊಂಡಿರುವ ಯುವಕರು ದಾರಿ ತಪ್ಪುತ್ತಿದ್ದಾರೆ. ಈಗ ಅವರು ದಾರಿ ತಪ್ಪಿದರೆ ಇಳಿವಯಸ್ಸಿನಲ್ಲಿ ದುಡಿಯುವ ಕಾರ್ಮಿಕ ಚಂದ್ರು ಅವರ ಹಾಗೆ ಪರಿಸ್ಥಿತಿ ಉಂಟಾಗುತ್ತದೆ. ಅದಕ್ಕಾಗಿ ಯುವಕರು ವಿದ್ಯಾವಂತರಾಗಬೇಕೆಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷ ಚಿದಾನಂದ ವಾಲಿ ಮಾತನಾಡಿ, ಕಾರ್ಮಿಕರಲ್ಲಿ ತಾರತಮ್ಯ ತೋರುತ್ತಿರುವ ಸರ್ಕಾರ ಜನರ ಪರಿಸ್ಥಿತಿಯನ್ನು ಅರಿತುಕೊಳ್ಳಬೆಕು. ನಮ್ಮ ಮುದ್ರಣ ಕಾರ್ಮಿಕರಿಗೂ ಸಹಿತ ಕಾರ್ಮಿಕ ಇಲಾಖೆಯಿಂದ ಸೌಲಭ್ಯ ಸಿಗುವಂತೆ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದರು.ಹಿರಿಯ ಕಾರ್ಮಿಕ ಚಂದ್ರ ಪೂಜಾರಿ ಅವರನ್ನು ಶಾಲು ಹೊದಿಸಿ ಅವರು ಮಾಡುತ್ತಿರುವ ಕಾರ್ಯ ಶ್ಲ್ಯಾಘನೀಯವೆಂದು ಹೃದಯಸ್ಪರ್ಶಿ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಚಿದಾನಂದ ವಾಲಿಕಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕಪಾಲಿ, ನಿರ್ದೇಶಕರಾದ ನಾಗರಾಜ ಬಿಸನಾಳ, ಬಸವರಾಜ ಹಾವಿನಾಳ, ಖಜಾಂಚಿ ಹನೀಪ್ ಮುಲ್ಲಾ, ಜಗದೀಶ ಶಹಾಪೂರ, ಉಮೇಶ ಶಿವಶರಣ, ದೀಪಕ ಜಾಧವ, ನಬಿ ಮಕಾಂದಾರ, ಬಸವರಾಜ ಬಿರಾದಾರ, ಸದಸ್ಯರಾದ ಬಸವರಾಜ ಬಿರಾದಾರ, ಕುಮಾರಸ್ವಾಮಿ ವಿಭೂತಿಮಠ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 