ಕುಡಿದ ಅಮಲಿನಲ್ಲಿ ನದಿಗೆ ಹಾರಿದ ಯುವಕ
A young man who jumped into the river while drunk
ಬೆಳಗಾವಿ 19: ಮದ್ಯದ ನಶೆಯಲ್ಲಿ ಯುವಕನೋರ್ವ ನದಿಗೆ ಹಾರಿದ ಘಟನೆ ಬೆಳಗಾವಿಯ ಕಂಗ್ರಾಳಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಸಚಿನ್ ಮಾನೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ.
ಕಂಗ್ರಾಳಿ ಗ್ರಾಮದ ಬಳಿ ಮಾರ್ಕಂಡೇಯ ನದಿಯ ತೀರದಲ್ಲಿ ಮದ್ಯದ ಬಾಟಲಿ, ನೀರಿನ ಬಾಟಲಿ ಹಾಗೂ ಶೇಂಗಾ ಪತ್ತೆಯಾಗಿದ್ದು, ಈತ ಕುಡಿದ ಅಮಲಿನಲ್ಲಿ ಹೀಗೆ ಮಾಡಿರಬಹುದು ಎಂದು ಕಾಣಿಸುತ್ತಿದೆ.
ಆತ್ಮಹತ್ಯೆಗೆ ಮೊದಲು ಈತನೊಬ್ಬರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ವಿವರಗಳು ಬಹಿರಂಗವಾಗಿವೆ. ಸ್ಥಳೀಯ ಯುವಕರೊಬ್ಬರ ಮೊಬೈಲ್ನಿಂದ ಕರೆ ಮಾಡಿದ ಬಳಿಕ ನದಿಗೆ ಹಾರಿದ್ದಾನೆ.
ಘಟನೆಯ ಪ್ರತ್ಯಕ್ಷದರ್ಶಿ ಪ್ರಸಾದ್ ಅವರು ನೀಡಿದ ಮಾಹಿತಿಯ ಪ್ರಕಾರ ಸಚಿನ್ ಮಾನೆ ನದಿಗೆ ಬೀಳುತ್ತಿದ್ದಂತೆ ಯುವಕರಿಬ್ಬರು ತಕ್ಷಣ ರಕ್ಷಣೆಗೆ ಮುಂದಾಗಿ ಪ್ಲಾಸ್ಟಿಕ್ ಎಸೆದು ಜೀವ ಉಳಿಸಲು ಯತ್ನಿಸಿದರು. ಆದರೆ ಯುವಕ ಅದನ್ನು ಹಿಡಿಯದೇ, ನದಿಯಲ್ಲೇ ತೇಲಿ ಹೋಗಿದ್ದಾನೆ.
ಈ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ದೊರಕುತ್ತಿದ್ದಂತೆಯೇ ಎಪಿಎಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರೀಶೀಲನೆ ನಡೆಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 