ಕುಡಿದ ಅಮಲಿನಲ್ಲಿ ನದಿಗೆ ಹಾರಿದ ಯುವಕ
A young man who jumped into the river while drunk
ಬೆಳಗಾವಿ 19: ಮದ್ಯದ ನಶೆಯಲ್ಲಿ ಯುವಕನೋರ್ವ ನದಿಗೆ ಹಾರಿದ ಘಟನೆ ಬೆಳಗಾವಿಯ ಕಂಗ್ರಾಳಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಸಚಿನ್ ಮಾನೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ.
ಕಂಗ್ರಾಳಿ ಗ್ರಾಮದ ಬಳಿ ಮಾರ್ಕಂಡೇಯ ನದಿಯ ತೀರದಲ್ಲಿ ಮದ್ಯದ ಬಾಟಲಿ, ನೀರಿನ ಬಾಟಲಿ ಹಾಗೂ ಶೇಂಗಾ ಪತ್ತೆಯಾಗಿದ್ದು, ಈತ ಕುಡಿದ ಅಮಲಿನಲ್ಲಿ ಹೀಗೆ ಮಾಡಿರಬಹುದು ಎಂದು ಕಾಣಿಸುತ್ತಿದೆ.
ಆತ್ಮಹತ್ಯೆಗೆ ಮೊದಲು ಈತನೊಬ್ಬರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ವಿವರಗಳು ಬಹಿರಂಗವಾಗಿವೆ. ಸ್ಥಳೀಯ ಯುವಕರೊಬ್ಬರ ಮೊಬೈಲ್ನಿಂದ ಕರೆ ಮಾಡಿದ ಬಳಿಕ ನದಿಗೆ ಹಾರಿದ್ದಾನೆ.
ಘಟನೆಯ ಪ್ರತ್ಯಕ್ಷದರ್ಶಿ ಪ್ರಸಾದ್ ಅವರು ನೀಡಿದ ಮಾಹಿತಿಯ ಪ್ರಕಾರ ಸಚಿನ್ ಮಾನೆ ನದಿಗೆ ಬೀಳುತ್ತಿದ್ದಂತೆ ಯುವಕರಿಬ್ಬರು ತಕ್ಷಣ ರಕ್ಷಣೆಗೆ ಮುಂದಾಗಿ ಪ್ಲಾಸ್ಟಿಕ್ ಎಸೆದು ಜೀವ ಉಳಿಸಲು ಯತ್ನಿಸಿದರು. ಆದರೆ ಯುವಕ ಅದನ್ನು ಹಿಡಿಯದೇ, ನದಿಯಲ್ಲೇ ತೇಲಿ ಹೋಗಿದ್ದಾನೆ.
ಈ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ದೊರಕುತ್ತಿದ್ದಂತೆಯೇ ಎಪಿಎಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರೀಶೀಲನೆ ನಡೆಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 