ಪ್ರಧಾನಿ ನಿವಾಸ ಪ್ರವೇಶಿಸಲು ಆಪ್ ಯತ್ನ: ತಡೆಯೊಡ್ಡಿದ ಭದ್ರತಾ ಸಿಬ್ಬಂದಿ
AAP leader's attempt to enter Prime Minister's residence: blocked by security guards
ನವದೆಹಲಿ 08: ಮುಖ್ಯಮಂತ್ರಿ ಅತಿಶಿ ನಿವಾಸದಲ್ಲಿ ಚಿನ್ನದ ಕಮೋಡ್, ಈಜುಕೊಳಗಳು ಸೇರಿದಂತೆ ಐಶಾರಾಮಿ ಸೌಲಭ್ಯಗಳಿವೆ ಎಂದು ಬಿಜೆಪಿ ಆರೋಪ ಮಾಡಿತ್ತು. ಈ ಆರೋಪ ತಳ್ಳಿಹಾಕಿದ್ದ ಎಎಪಿ, ಹಾಗಿದ್ದರೆ ಪ್ರಧಾನಿ ನಿವಾಸದಲ್ಲಿ ಏನೆಲ್ಲ ಸೌಲಭ್ಯವಿದೆ ಎಂದು ಜನರಿಗೆ ತೋರಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿತು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೆಹಲಿ ನಿವಾಸದೆದುರು ಪ್ರತಿಭಟನೆ ನಡೆಸಿದ ಎಎಪಿ ಮುಖಂಡರಾದ ಸೌರಭ್ ಭಾರದ್ವಾಜ್, ಸಂಜಯ್ ಸಿಂಗ್ ಮತ್ತು ಇತರ ನಾಯಕರು, ಬಳಿಕ ಪ್ರಧಾನಿ ನಿವಾಸಕ್ಕೆ ಪ್ರವೇಶಿಸಲು ಮುಂದಾಗಿದ್ದಾರೆ. ಈ ಸಂದರ್ಭ ಭದ್ರತಾ ಸಿಬ್ಬಂದಿ ಅವರಿಗೆ ತಡೆಯೊಡ್ಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ಸಿಂಗ್, ಬಿಜೆಪಿಗರು ಸಿಎಂ ನಿವಾಸದ ಸೌಲಭ್ಯಗಳ ಬಗ್ಗೆ ಹುರುಳಿಲ್ಲದ ಆರೋಪ ಮಾಡುತ್ತಿದ್ದಾರೆ. ಚಿನ್ನದ ಕಮೋಡ್, ಈಜುಕೊಳ, ಮಿನಿ ಬಾರ್ ಎಲ್ಲಿದೆ ಎಂದು ತೋರಿಸಲಿ. ಹಾಗೆಯೇ ಪ್ರಧಾನಿ ನಿವಾಸದ ದರ್ಶನವನ್ನು ಜನರಿಗೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ. ಪ್ರಧಾನಿ ನಿವಾಸದಲ್ಲಿ ಸೌಲಭ್ಯಗಳ ಕುರಿತ ಪರಿಶೀಲನೆಗೆ ಬಂದಿದ್ದ ಎಎಪಿ ನಿಯೋಗಕ್ಕೆ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಈಗ ಹಿಂದಿರುಗುತ್ತಿದ್ದೇವೆ ಎಂದಿದ್ದಾರೆ.
ಪ್ರಧಾನಿ ನಿವಾಸದಲ್ಲಿಯೂ ಶೋಧ ನಡೆಸಬೇಕು. ರೂ.33 ಕೋಟಿ ವೆಚ್ಚದಲ್ಲಿ ಸಿಎಂ ನಿವಾಸ ನಿರ್ಮಾಣವಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ರೂ. 2700 ಕೋಟಿ ವೆಚ್ಚದಲ್ಲಿ ಪ್ರಧಾನಿ ಮನೆ ಕಟ್ಟಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಎರಡೂ ನಿವಾಸಗಳನ್ನು ನೋಡಬೇಕು ಎಂದಿದ್ದಾರೆ. ಪ್ರತಿ ದಿನ ಹೊಸ ಹೊಸ ಫೋಟೊ, ವಿಡಿಯೊಗಳನ್ನು ಕಳುಹಿಸುತ್ತಿದ್ದ ಬಿಜೆಪಿಯವರು, ಇಂದು ನಾವು ಮಾಧ್ಯಮ ಪ್ರತಿನಿಧಿಗಳ ಜೊತೆ ಪ್ರಧಾನಿ ನಿವಾಸ ನೋಡಲು ಬಂದರೆ ನಾಪತ್ತೆಯಾಗಿದ್ದಾರೆ ಎಂದು ಕುಟುಕಿದರು.
ದೆಹಲಿ ಮುಖ್ಯಮಂತ್ರಿ ಮನೆಗೆ ನುಗ್ಗಲು ಯತ್ನಿಸಿದ್ದ ಬಿಜೆಪಿ ಮುಖಂಡರ ಪ್ರತಿಭಟನೆಗೆ ಪ್ರತಿಯಾಗಿ ಎಎಪಿ, ಪ್ರಧಾನಿ ನಿವಾಸವನ್ನೂ ಜನರಿಗೆ ತೋರಿಸಿ ಎಂದು ಈ ಪ್ರತಿಭಟನೆ ಹಮ್ಮಿಕೊಂಡಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 