ಪಡಿತರ ಅಕ್ಕಿಯ ಅಕ್ರಮ ದಂಧೆ ಮೇಲೆಮತ್ತೆ ಎಸಿ ರಾಜೇಶ್ ದಾಳಿ
AC Rajesh attacks illegal ration rice racket again
ಬಳ್ಳಾರಿ 24: ನಗರದಲ್ಲಿ ಸಾರ್ವಜನಿಕರಿಗೆ ವಿತರಣೆಯಾಗಬೇಕಿದ್ದ 50 ಕಿಲೋದ 523 ಚೀಲ ಪಡಿತರ ಅಕ್ಕಿಯನ್ನು ಗುಜರಾತಿಗೆ ಸಾಗಾಣೆ ಮಾಡಲು ಹೊರಟ್ಟಿದ್ದನ್ನು ಬಳ್ಳಾರಿ ಉಂ ವಿಭಾಗದ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ. ಅವರು ನನ್ನೆ ರಾತ್ರಿ ತಡೆಹಿಡಿದಿದ್ದಾರೆ.ನಗರದ ಎಸ್.ಎಲ್.ಎನ್ ಮಾಲ್ ಬಳಿ ಇರುವ ದರೂರು ಪುಲ್ಲಯ್ಯ ಕಾಂಪೌಂಡ್ ಒಳ ಆವರಣದಲ್ಲಿ ಪಡಿತರ ಅಕ್ಕಿಯನ್ನು ಬಳ್ಳಾರಿಯ ವಾಹನಗಳ ಮೂಲಕ ತಂದು ಗುಜರಾತ್ ಮೂಲದ ಸರಕು ಸಾಗಣೆ ಲಾರಿಯಲ್ಲಿ ಲೋಡ್ ಮಾಡಲಾಗುತ್ತಿತ್ತು.ಹಗರಿಬೊಮ್ಮನಹಳ್ಳಿಯಿಂದ ಬಂದಿದ್ದ 10 ಜನ ಹಮಾಲಿಗಳು ಚಿಕ್ಕ ಲಾರಿಯಿಂದ ದೊಡ್ಡ ಲಾರಿಗೆ ಲೋಡ್ ಮಾಡುತ್ತಿದ್ದರು. ಇವರಿಗೆ ಶ್ರೀಧರ್ ಎಂಬಾತ 750 ಕೂಲಿ ನೀಡಿ ಈ ದಂಧೆ ಮಾಡಿಸುತ್ತಿದ್ದನಂತೆ.ಈ ಬಗ್ಗೆ ತಮಗೆ ದೊರೆತ ಮಾಹಿತಿಯಿಂದ ಸ್ವತಃ ರಾಜೇಶ್ ಅವರು ತಲೆಗೆ ಟವಕ್ ಕಟ್ಟಿಕೊಂಡು ಬೈಕ್ ನಲ್ಲಿ ಬಂದು ಈ ದಂಧೆಗೆ ಬ್ರೇಕ್ ಹಾಕಿದ್ದಾರೆ.
ಇಬ್ಬರು ಗುಜರಾತ್ ಮೂಲದ ಚಾಲಕರು, ಬಳ್ಳಾರಿ ಮೂಲದ ಒಬ್ಬ ಚಾಲಕ, 5 ಹಮಾಲಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಒಬ್ಬ ಚಾಲಕ ಮತ್ತು 5 ಹಮಾಲಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ವಿಚಾರಣೆ ವೇಳೆ ಸದರಿ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಗುಜರಾತ್ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ತಯಾರಿ ಮಾಡುತ್ತಿರುವುದಾಗಿ ಗುಜರಾತ್ ಮೂಲದ ಚಾಲಕ ಹೇಳಿದ್ದಾನೆ.ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಕರೆಸಿ ಪ್ರಕರಣ ದಾಖಲಿಸಿದೆ.ಈ ಹಿಂದೆ ಸಹ ಬಳ್ಳಾರಿ ನಗರದ ಲಾಲಾ ಕಮಾನ್ ನಲ್ಲಿ ನಡೆಯುತ್ತಿದ್ದ ಅಕ್ರಮವಾಗಿ ಪಡಿತರ ಅಕ್ಕಿಯ ಸಾಗಾಣೆಯ ದಂಧೆ ಕೊರರಿಗೆ ಬಿಸಿ ಮುಟ್ಟಿಸಿದ್ದರು. ಅಲ್ಲದೆ ಹಗರಿ ನದಿಯಿಂದ ಅಕ್ರಮವಾಗಿ ಎತ್ತಿನಬಂಡಿಗಳಲ್ಲಿ ಮರಳು ಸಾಗಾಸುವ ದಂಧೆ ಕೋಋ ಮೇಲೂ ರಾಜೇಶ್ ಅವರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 