ಬೆಂಗಳೂರು ಸೇರಿದಂತೆ ಹಾಟ್ಸ್ಪಾಟ್ ಜಿಲ್ಲೆಗಳಲ್ಲಿ ಇನ್ನಷ್ಟು ಬಿಗಿ ಕ್ರಮ: ಎಡಿಜಿಪಿ ನೇಮಕ- ಬೊಮ್ಮಾಯಿ
ಬೆಂಗಳೂರು, ಏ. 14, ಕೊರೋನಾ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಬಿಗಿ ಲಾಕ್ ಡೌನ್ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಕೊರೊನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಮತ್ತಷ್ಟು ಕ್ರಮ ಬಿಗಿಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಹೆಚ್ಚಾಗಿರುವ ಬೀದರ್, ಕಲಬುರಗಿ, ಮೈಸೂರು ಜಿಲ್ಲೆಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಂಡು ಆ ಜಿಲ್ಲೆಗಳಲ್ಲಿ ಒಬ್ಬೊಬ್ಬ ಎಡಿಜಿಪಿಗಳನ್ನು ನೇಮಿಸಿ ಮತ್ತಷ್ಟು ನಿಗಾ ವಹಿಸಲಾಗುವುದು. ಜನರ ಓಡಾಟಕ್ಕೆ ಕಡಿವಾಣ ಹಾಕಲಾಗುವುದು ಎಂದರು.ಈಗಿರುವ ಭದ್ರತೆಗಿಂತ ಮತ್ತಷ್ಟು ಭದ್ರತೆ, ಇನ್ನಷ್ಟು ಬ್ಯಾರಿಕೇಡ್ ಗಳನ್ನು ಹಾಕಿ ಮತ್ತಷ್ಟು ತಪಾಸಣೆ ಹೆಚ್ಚಿಸಿ ವಾಹನಗಳ ಓಡಾಟ ನಿರ್ಬಂಧಿಸಲಾಗುವುದು. ಈಗಾಗಲೇ 57 ಸಾವಿರ ವಾಹನ ಸೀಜ್ ಮಾಡಿದ್ದೇವೆ. ಒಂದು ವೇಳೆ ನಿಯಮ ಮೀರಿ ಮತ್ತೆ ಮತ್ತೆ ಓಡಾಡಿದರೆ ಮತ್ತಷ್ಟು ವಾಹನ ಗಳನ್ನು ಜಪ್ತಿ ಮಾಡಲಾಗುವುದು. ಸಾರ್ವಜನಿಕರ ಓಡಾಟದ ಸಮಯವನ್ನು ಕಡಿತಗೊಳಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 