ಗಡಿಭಾಗದ ವಿದ್ಯಾರ್ಥಿಗಳಿಗೆ ಎಜಿಎಂ ಕಾಲೇಜು ಆರಂಭ
AGM College opens for border students
ಚಿಕ್ಕೋಡಿ 1: ಗಡಿಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಶಮನೇವಾಡಿಯಲ್ಲಿ ಎಜಿಎಂ ಇಂಜಿನಿಯರಿಂಗ್ ಕಾಲೇಜು ಆರಂಭಿಸಲಾಗಿದೆ ಎಂದು ರಾಷ್ಟ್ರಸಂತ ಶ್ರೀ 108 ಗುಣಧರನಂದಿ ಮಹಾರಾಜರು ಹೇಳಿದರು.
ತಾಲೂಕಿನ ಶಮನೇವಾಡಿ ಹೊರವಲಯದಲ್ಲಿರುವ ಕಾಲೇಜಿನ ಕಟ್ಟಡದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹಿ ಮಹಾರಾಷ್ಟ ಗಡಿಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಲಭ್ಯವಾಗಬೇಕೆಂಬ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಕಾರ್ಯಾರಂಭ ಮಾಡಿದೆ ಎಂದು ತಿಳಿಸಿದರು.
“ಬಡ ಕುಟುಂಬದಲ್ಲಿ ಜನಿಸಿದ ನನಗೆ ಶಿಕ್ಷಣ ಪಡೆಯಲು ಎದುರಾದ ಸಂಕಷ್ಟಗಳು ಮತ್ತೊಬ್ಬ ವಿದ್ಯಾರ್ಥಿಗೆ ಎದುರಾಗಬಾರದು ಎಂಬ ಸಂಕಲ್ಪದಿಂದ 2007ರಲ್ಲಿ ಎಸ್.ಡಿ.ಎಂ. ಟ್ರಸ್ಟ್ ಮೂಲಕ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಲಾಯಿತು. ಪ್ರಸ್ತುತ ಟ್ರಸ್ಟ್ನಡಿ ವಿವಿಧೆಡೆ 15 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಶಕಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದಾರೆ. ಸದ್ಯ ಸುಮಾರು 8,000 ವಿದ್ಯಾರ್ಥಿಗಳು ವಿವಿಧ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ,” ಎಂದು ಹೇಳಿದರು.
ಹೊಸ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಹಾಗೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗಗಳಲ್ಲಿ ಬಿ.ಇ. ಪದವಿ ಶಿಕ್ಷಣ ಆರಂಭಿಸಲಾಗಿದೆ ಎಂದು ತಿಳಿಸಿದರು.
ಕಾಲೇಜಿನಲ್ಲಿ ಅನುಭವಿ ಬೋಧಕ ವರ್ಗ, ಡಾಕ್ಟರೇಟ್ ಪದವೀಧರ ಪ್ರಾಧ್ಯಾಪಕರು ಸೇವೆ ಸಲ್ಲಿಸಲಿದ್ದು, ಬಡ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ, ವಿದ್ಯಾರ್ಥಿವೇತನ, ಉಚಿತ ಬಸ್ ಸೌಲಭ್ಯ ಹಾಗೂ ಮೊದಲ ವರ್ಷದಿಂದಲೇ ತರಬೇತಿ ಮತ್ತು ಕ್ಯಾಂಪಸ್ ನೇಮಕಾತಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಹೇಳಿದರು.
ಐಐಟಿ ತಜ್ಞರಿಂದ ಆನ್ಲೈನ್ ತರಬೇತಿ, ಮಾಸಿಕ ವಿಶೇಷ ಉಪನ್ಯಾಸ, ಪ್ರತಿ ಶನಿವಾರ ತಜ್ಞರ ಮಾರ್ಗದರ್ಶನ, ಆರೋಗ್ಯ ಜಾಗೃತಿ ಶಿಬಿರ ಹಾಗೂ ವಿಜ್ಞಾನ ಮೇಳಗಳನ್ನು ಆಯೋಜಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕಿ ಭಾಗ್ಯಶ್ರೀ ಅಲಗೂರೆ, ಪ್ರಾಚಾರ್ಯ ಡಾ. ಆರಿ್ಪ. ಪಾಟೀಲ, ಉಪಪ್ರಾಚಾರ್ಯ ಡಾ. ಬಿ.ಜೆ. ಪಾಟೀಲ, ಡಾ. ಸಂಜಯ ಅಂಕಲಿ, ಡಾ. ಸಚಿನ್ ಮೆಕ್ಕಳಕಿ, ಡಾ. ಶಾಂತಭೂಷಣ ಬಿ.ಎಂ., ಡಾ. ಶಶಿಕಾಂತ ವಾಳಕೆ, ಕೆ.ಆರ್. ಪಾಟೀಲ, ಅಭಿಜಿತ್ ಅಕ್ಕಿವಾಟೆ, ಅಶ್ವಿನಿ ಫರಲಾದ, ಸ್ನೇಹಾ ವಾಳಕೆ, ಅಶ್ವಿನಿ ಮೊನಾಚಾರ್ಯ, ವೈಶ್ಯವ ಶೆಗಳೆ, ರಾಣಿ ಸುತಾರೆ ಹಾಗೂ ರವಿ ವಾಳಕೆ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 