ದಲಿತರು, ಬಡವರ ವಿರೋಧಿ ಬಜೆಟ್: ಎಚ್.ಕೆ. ಕುಮಾರಸ್ವಾಮಿ
ಬೆಂಗಳೂರು, ಮಾ.5, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ. ಆಯವ್ಯಯದಲ್ಲಿ ನಿರ್ದಿಷ್ಟ ಹಣ ಮೀಸಲು ಬಗ್ಗೆ ಪ್ರಸ್ತಾಪ ಇಲ್ಲ. ತೈಲ ಬೇಲೆ ಏರಿಕೆ ಮಾಡಿ ಎಲ್ಲಾ ಬೆಲೆಗಳನು ಏರಿಸುವ ಕೆಲಸ ಮಾಡಿದ್ದಾರೆ ಎಂದರು.ಬೆಂಗಳೂರು ನಗರಕ್ಕೆ ಕೇವಲ 8000 ಕೋಟಿ ನೀಡಿದ್ದಾರೆ, ಮಾನವ- ಪ್ರಾಣಿ ಸಂಘರ್ಷ ಹೆಚ್ಚುತ್ತಿದೆ, ಅದರ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. 20000 ಕೋಟಿಯ ಎತ್ತಿನಹೊಳೆಗೆ ಕೇವಲ 1500 ಕೋಟಿ ಇಟ್ಟರೆ ಅದನ್ನು ಪೂರ್ಣಗೊಳಿಸಲಾಗುವುದಿಲ್ಲ ಎಂದು ಟೀಕಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 