ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎಪಿ ಅರ್ಜುನ್
ಬೆಂಗಳೂರು, ಮೇ 10 ,ಲಾಕ್ ಡೌನ್ ನಡುವೆಯೂ ಸ್ಯಾಂಡಲ್ವುಡ್ ನಿರ್ದೇಶಕ ಎ.ಪಿ. ಅರ್ಜುನ್ ಅವರು ಅನ್ನಪೂರ್ಣ ಜತೆಗೆ ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಅನ್ನಪೂರ್ಣ ಅವರು ಹಾಸನ ಮೂಲದವರಾಗಿದ್ದು, ಬೆಂಗಳೂರಿನ ಸ್ವಗೃಹದಲ್ಲಿ ಕೆಲವೇ ಆಪ್ತರ ಸಮ್ಮುಖದಲ್ಲಿ ಅರ್ಜುನ್ ಹಾಗೂ ಅನ್ನಪೂರ್ಣ ಅವರ ಕಲ್ಯಾಣ ಸರಳವಾಗಿ ನೆರವೇರಿದೆ.ವಿವಾಹ ಕಾರ್ಯಕ್ರಮದಲ್ಲಿ, ಕುಟುಂಬದವರು, ಆಪ್ತರು, ಸಿನಿಮಾ ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದರು.ನವದಂಪತಿಗೆ ನಟ ಧ್ರುವ ಸರ್ಜಾ ದಂಪತಿ, ನಿರ್ದೇಶಕರಾದ ಪವನ್ ಒಡೆಯರ್, ತರುಣ್ ಸುಧೀರ್, ಪ್ರೇಮ್ ಸೇರಿ ಹಲವು ಸಿನಿ ಸ್ನೇಹಿತರು ಶುಭಕೋರಿದ್ದಾರೆ. ಅರ್ಜುನ್ ಅವರು 'ಅಂಬಾರಿ', 'ಅದ್ದೂರಿ', 'ರಾಟೆ', 'ಐರಾವತ' ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 