ಎಪಿಎಂಸಿ ರಸ್ತೆ ಡಾಂಬರೀಕರಣ: ಕಾಮಗಾರಿ ಪರಿಶೀಲಿಸಿದ ಶಾಸಕ ಅರುಣಕುಮಾರ
ಲೋಕದರ್ಶನವರದಿ
ರಾಣೇಬೆನ್ನೂರು22: ಇಲ್ಲಿನ ಪ್ರಧಾನ ಅಂಚೆಕಛೇರಿ ಬಳಿಯಿಂದ ನಗರ ಪೋಲೀಸ್ ಠಾಣಾ ಅಶೋಕ ವೃತ್ತದವರೆಗೂ ಪಕ್ಕಾ ಡಾಂಭಾರ್ ರಸ್ತೆ ಕಾಮಾಗಾರಿ ಆರಂಭವಾಗಿದ್ದು, ಸ್ಥಳಕ್ಕೆ ಧಾವಿಸಿದ್ದ, ಶಾಸಕ ಅರುಣಕುಮಾರ ಪೂಜಾರ ಮತ್ತವರ ಕಾರ್ಯಕರ್ತರು ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಗರದ ಬಹುತೇಕ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಆರಂಭವಾಗಿದ್ದು, ಗುಣಮಟ್ಟದ ಮತ್ತು ಪರಿಪೂರ್ಣ ಸುಭದ್ರ ಕೆಲಸ ಪಡೆಯಲು ಅಲ್ಲಿನ ನಾಗರೀಕರು ಸ್ಥಳೀಯವಾಗಿ ಪರಿಶೀಲನೆ ನಡೆಸಬೇಕು.
ಇದರಿಂದ ಕಾಮಗಾರಿ ನಡೆದಿರುವ ಬಗ್ಗೆ ಸಮಗ್ರ ಮಾಹಿತಿ ತಿಳಿಯಲು ಸಾಧ್ಯವಾಗುವುದು ಎಂದ ಅವರು ಕಾಮಗಾರಿ ಮಾಡುವ ಕಾಮರ್ಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಬಾರದಂತೆ ನೋಡಿಕೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚೋಳಪ್ಪ ಕಸವಾಳ, ನಗರಸಭೆಯ ಗುಡಸಲಮನಿ, ಪವನ್ಕುಮಾರ ಮಲ್ಲಾಡದ, ಈರಣ್ಣ ಸೇರಿದಂತೆ ಮತ್ತಿತರ ಗಣ್ಯರು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 