ಎಪಿಎಂಸಿ ರಸ್ತೆ ಡಾಂಬರೀಕರಣ: ಕಾಮಗಾರಿ ಪರಿಶೀಲಿಸಿದ ಶಾಸಕ ಅರುಣಕುಮಾರ
ಲೋಕದರ್ಶನವರದಿ
ರಾಣೇಬೆನ್ನೂರು22: ಇಲ್ಲಿನ ಪ್ರಧಾನ ಅಂಚೆಕಛೇರಿ ಬಳಿಯಿಂದ ನಗರ ಪೋಲೀಸ್ ಠಾಣಾ ಅಶೋಕ ವೃತ್ತದವರೆಗೂ ಪಕ್ಕಾ ಡಾಂಭಾರ್ ರಸ್ತೆ ಕಾಮಾಗಾರಿ ಆರಂಭವಾಗಿದ್ದು, ಸ್ಥಳಕ್ಕೆ ಧಾವಿಸಿದ್ದ, ಶಾಸಕ ಅರುಣಕುಮಾರ ಪೂಜಾರ ಮತ್ತವರ ಕಾರ್ಯಕರ್ತರು ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಗರದ ಬಹುತೇಕ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಆರಂಭವಾಗಿದ್ದು, ಗುಣಮಟ್ಟದ ಮತ್ತು ಪರಿಪೂರ್ಣ ಸುಭದ್ರ ಕೆಲಸ ಪಡೆಯಲು ಅಲ್ಲಿನ ನಾಗರೀಕರು ಸ್ಥಳೀಯವಾಗಿ ಪರಿಶೀಲನೆ ನಡೆಸಬೇಕು.
ಇದರಿಂದ ಕಾಮಗಾರಿ ನಡೆದಿರುವ ಬಗ್ಗೆ ಸಮಗ್ರ ಮಾಹಿತಿ ತಿಳಿಯಲು ಸಾಧ್ಯವಾಗುವುದು ಎಂದ ಅವರು ಕಾಮಗಾರಿ ಮಾಡುವ ಕಾಮರ್ಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಬಾರದಂತೆ ನೋಡಿಕೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚೋಳಪ್ಪ ಕಸವಾಳ, ನಗರಸಭೆಯ ಗುಡಸಲಮನಿ, ಪವನ್ಕುಮಾರ ಮಲ್ಲಾಡದ, ಈರಣ್ಣ ಸೇರಿದಂತೆ ಮತ್ತಿತರ ಗಣ್ಯರು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 