ಗೌರವ ಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಹೋರಾತ್ರಿ ಧರಣಿ

ಗೌರವ ಧನ ಹೆಚ್ಚಳಕ್ಕೆ  ಆಶಾ ಕಾರ್ಯಕರ್ತೆಯರ ಆಹೋರಾತ್ರಿ ಧರಣಿ ASHA workers stage overnight protest for increase in honorarium

ಬಳ್ಳಾರಿ  13:  ತಮಗೆ ನೀಡುವ ಮಾಸಿಕ ಗೌರವ ಧನವನ್ನು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾಗಳು ಮಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ಇಂದು ಎರಡನೇ ದಿನಕ್ಕೆ ಕಾಲಿರಿಸಿದೆ.

ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು ಎಂಬುದು ಕಾರ್ಯಕರ್ತೆಯರು ಆಗ್ರಹವಾಗಿದೆ.ಸತ್ಯಾಗ್ರಹದಲ್ಲಿ ಸಂಘದ ಕವಿತ,ಶಾಂತಾ, ಎ. ದೇವದಾಸ್ ಸೇರಿದಂತೆ ನೂರಾರು ಜನ ಆಶಾ ಕಾರ್ಯ ಕರ್ತರು ಪಾಲ್ಗೊಂಡಿದ್ದಾರೆ.