ದಿ. 17 ರಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ

ತಾಳಿಕೋಟಿ 16: ತಾಲೂಕ ಆಡಳಿತ,ತಾಲೂಕ ಪಂಚಾಯತ,ಸಮಾಜ ಕಲ್ಯಾಣ ಇಲಾಖೆ,ಪುರಸಭೆ ಹಾಗೂ ವಾಲ್ಮೀಕಿ ಸಮಾಜದ ವತಿಯಿಂದ ಆದಿಕವಿ ವಾಲ್ಮೀಕಿ ಮಹರ್ಷಿ ಅವರ ಜಯಂತೋತ್ಸವವನ್ನು ದಿ. 17 ರಂದು ಪಟ್ಟಣದಲ್ಲಿ ಆಚರಿಸಲಾಗುವುದು.  

ಜಯಂತಿ ಅಂಗವಾಗಿ ಮುಂಜಾನೆ 8 ಘಂಟೆಗೆ ತಾಲೂಕಿನ ಎಲ್ಲಾ ಸರ್ಕಾರಿ  ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪೂಜೆ ಜರಗುವುದು. ಮುಂ.09  ಘಂಟೆಗೆ ದೇವರ ಹಿಪ್ಪರಗಿ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ತಾಲೂಕಾಡಳಿತ ಹಾಗೂ ವಾಲ್ಮೀಕಿ ಸಮಾಜ ಬಾಂಧವರಿಂದ ವಿಶೇಷ ಪೂಜಾ ಕಾರ್ಯಕ್ರಮ ಜರಗುವುದು. 

ಮುಂ.10 ಘಂಟೆಗೆ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಜರಗುವುದು. ತಹಸೀಲ್ದಾರ್ ಕೀರ್ತಿ ಚಾಲಕ್ ಅಧ್ಯಕ್ಷತೆ ವಹಿಸುವರು,ಪುರಸಭೆ ಮುಖ್ಯಾಧಿಕಾರಿ ಮೋಹನ್ ಜಾದವ್,ತಾಪಂ ಇಒ ಮಸಳಿ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಟಿ.ವಿ.ಮಂಟೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.ಶಿಕ್ಷಕ ಎಸ್‌.ಸಿ.ಗುಡಗುಂಟಿ ಮಹರ್ಷಿ ವಾಲ್ಮೀಕಿ ಜೀವನ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ವಾಲ್ಮೀಕಿ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.