ಕಡಲ್ಗಳ್ಳರಿಂದ 20 ಭಾರತೀಯರ ಅಪಹರಣ
ನವದೆಹಲಿ, ಡಿ 17: ವಾಣಿಜ್ಯ ಹಡಗಿನಲ್ಲಿ ಪ್ರಯಾಣ ಮಾಡುತ್ತಿದ್ದ 20 ಭಾರತೀಯರನ್ನು ಆಫ್ರಿಕಾದ ಪಶ್ಚಿಮ ಕರಾವಳಿ ತೀರದ ಬಳಿ ಕಡಲ್ಗಳ್ಳರು ಅಪಹರಣ ಮಾಡಿದ್ದಾರೆ.ಅಪಹೃತ ಒತ್ತೆಯಾಳುಗಳ ಬಿಡುಗಡೆಗೆ, ಸುರಕ್ಷತೆಗೆ ವಿಶೇಷ ಗಮನ ಹರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಈ ವಿಷಯವನ್ನು ಭಾರತ ಸರ್ಕಾರ ಕೂಡಲೇ ನೈಜೀರಿಯಾ ಸರ್ಕಾರದ ಗಮನಕ್ಕೆ ತಂದಿದೆ.ಹಾಂಕಾಂಗ್ ಮೂಲದ ಹಡಗಿನಲ್ಲಿದ್ದ 18 ಮಂದಿ ಭಾರತೀಯರನ್ನು ಕಡಲ್ಗಳ್ಳರು ನೈಜೀರಿಯಾ ಕರಾವಳಿಯಲ್ಲಿ ಅಪಹರಿಸಿದ 10 ದಿನಗಳಲ್ಲೇ ಮತ್ತೊಂದು ಕಹಿ ಘಟನೆ ವರದಿಯಾಗಿದೆ.ಇದೆ 15ರಂದು ಎಂಟಿ ಡ್ಯೂಕ್ ಹಡಗಿನಲ್ಲಿದ್ದ 20 ಮಂದಿ ಭಾರತೀಯ ಸಿಬ್ಬಂದಿಯನ್ನು ಕಡಲ್ಗಳ್ಳರು ಅಪಹರಣ ಮಾಡಿರುವುದು ಬಹಳ ಆತಂಕದ ಸಂಗತಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಇದು ಒಂದು ವರ್ಷದಲ್ಲಿ ಕಡಲ್ಗಳ್ಳರು ಭಾರತೀಯರನ್ನು ಗುರಿ ಮಾಡಿದ ಮೂರನೇ ಪ್ರಕರಣವಾಗಿದೆ. ಈ ವಿಚಾರವನ್ನು ಅಬುಜಾದಲ್ಲಿ ನೈಜೀರಿಯಾ ಅಧಿಕಾರಿಗಳು ಹಾಗೂ ಇತರ ನೆರೆ ರಾಷ್ಟ್ರಗಳ ಗಮನಕ್ಕೂ ತರಲಾಗಿದೆ. ಮೇಲಾಗಿ ಅಪಹೃತರ ಬಿಡುಗಡೆಗೆ, ಸುರಕ್ಷತೆಗೆ ಗಮನ ಕೊಡಲಾಗಿದೆ ಎಂದೂ ಹೇಳಿದ್ದಾರೆ .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 