ಅಭಿನವ ಶಾಂತಲಿಂಗ ಶ್ರೀಗಳ ಇಷ್ಟಲಿಂಗ ಮಹಾಪೂಜೆ
Abhinava Shantalinga's Ishtalinga Mahapuja
ಅಮ್ಮಿನಬಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಲೋಕಕಲ್ಯಾಣ ಸಂಕಲ್ಪದೊಂದಿಗೆ
ಧಾರವಾಡ, 19 : ತಾಲೂಕಿನ ಅಮ್ಮಿನಬಾವಿ ಗ್ರಾಮದ ಐತಿಹಾಸಿಕ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಲೋಕಕಲ್ಯಾಣ ಮತ್ತು ವಿಶ್ವಶಾಂತಿ ಸಂಕಲ್ಪದೊಂದಿಗೆ ಶ್ರೀಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಶುಕ್ರವಾರ (ಜುಲೈ-25ರಂದು) ಆರಂಭಗೊಳ್ಳಲಿದೆ.
ಶ್ರೀಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಒಂದು ತಿಂಗಳ ಈ ಇಷ್ಟಲಿಂಗ ಮಹಾಪೂಜಾ ಕೈಂಕರ್ಯಕ್ಕೆ ಚಾಲನೆ ನೀಡುವರು. ಆಗಷ್ಟ-23 ರವರೆಗೆ ನಿತ್ಯ ಪ್ರಾತಃಕಾಲ 8 ಗಂಟೆಗೆ ಮಠದ ಪ್ರಾಂಗಣದಲ್ಲಿ ನಡೆಯಲಿರುವ ಈ ಸಾಮೂಹಿಕ ಇಷ್ಟಲಿಂಗ ಮಹಾಪೂಜೆಯಲ್ಲಿ ಸಮಸ್ತ ಸದ್ಭಕ್ತ ಸಮೂಹ ಪಾಲ್ಗೊಳ್ಳಬಹುದಾಗಿದೆ.
ನಿತ್ಯ ರುದ್ರಾಭಿಷೇಕ : ಶ್ರೀಮಠದ ಕರ್ತೃ ಗದ್ದುಗೆಗೆ ಹಾಗೂ ಕ್ಷೇತ್ರನಾಥ ಶ್ರೀವೀರಭದ್ರಸ್ವಾಮಿಗೆ ನಿತ್ಯವೂ ಪ್ರಾತಃಕಾಲದಲ್ಲಿ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿಯ ವಿಶೇಷ ಪೂಜಾ ಕೈಂಕರ್ಯಗಳು ಸೋಮಲಿಂಗಶಾಸ್ತ್ರಿ ಗುಡ್ಡದಮಠ, ಶಿವಯೋಗಿ ಹಿರೇಮಠ, ವಿನಾಯಕ ಹಿರೇಮಠ, ಈರಯ್ಯ ಹಿರೇಮಠ ಅವರಿಂದ ನಡೆಯಲಿವೆ.
ಶ್ರಾವಣ ತಪೋನುಷ್ಠಾನ : ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆಯ ಶ್ರಾವಣ ತಪೋನುಷ್ಠಾನದಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳೂ ಸೇರಿದಂತೆ ಅಮ್ಮಿನಬಾವಿ, ಮರೇವಾಡ, ತಿಮ್ಮಾಪೂರ, ಕರಡಿಗುಡ್ಡ, ಕವಲಗೇರಿ, ಚಂದನಮಟ್ಟಿ, ಹಾರೋಬೆಳವಡಿ ಸೇರಿದಂತೆ ಹತ್ತಿರದ ಗ್ರಾಮಗಳ ಶಿಷ್ಯ-ಸದ್ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಮಠದ ವ್ಯವಸ್ಥಾಪಕ ಶಿವಾನಂದಸ್ವಾಮಿ ಹಿರೇಮಠ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 