ಏಷ್ಯನ್ ಆರ್ಚರಿ ಚಾಂಪಿಯನ್ಶಿಪ್: ಅಭಿಷೇಕ್ ವರ್ಮಾ-ಜ್ಯೋತಿ ಸುರೇಖಾ ಮಿಶ್ರ ಜೋಡಿಗೆ ಚಿನ್ನದ ಪದಕ
archary
ಬ್ಯಾಂಕಾಕ್, ನ 27 -ಭಾರತದ ಅಭಿಷೇಕ್ ವರ್ಮಾ ಹಾಗೂ ಜ್ಯೋತಿ ಸುರೇಖಾ ವೆನ್ನಮ್ ಜೋಡಿಯು ಇಲ್ಲಿಂದು ಮುಕ್ತಾಯವಾದ 21ನೇ ಏಷ್ಯನ್ ಆರ್ಚರಿ ಚಾಂಪಿಯನ್ಶಿಪ್ ಕಾಪೌಂಡ್ ಮಿಶ್ರ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿತು. ಒಟ್ಟಾರೆ, ಭಾರತ ಎಂಟು ಪದಕಗಳನ್ನು ಪಡೆಯುವ ಮೂಲಕ ಚಾಂಪಿಯನ್ಶಿಪ್ ಅಭಿಯಾನ ಮುಗಿಸಿತು.
ವರ್ಮಾ ಹಾಗೂ ವೆನ್ನಮ್ ಮಿಶ್ರ ಜೋಡಿಯು ಚೈನೀಸ್ ತೈಫೆಯ ಯಿ-ಹ್ಯೂಸುನ್ ಚೆನ್ ಮತ್ತು ಚಿಯಾ -ಲುಹಾ ಚೆನ್ ಜೋಡಿಯ ವಿರುದ್ಧ 158-151 ಅಂತರದಲ್ಲಿ ಗೆದ್ದು ಚಿನ್ನದ ಪದಕಕ್ಕೆೆ ಭಾಜನವಾಯಿತು. ಒಟ್ಟಾಾರೆ, ಭಾರತ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ನಾಲ್ಕು ಪದಕಗಳೊಂದಿಗೆ ತನ್ನ ಅಭಿಯಾನ ಅಂತ್ಯಗೊಳಿಸಿತು.
ಇದಕ್ಕೂ ಮುನ್ನ ಕಾಪೌಂಡ್ ತಂಡದ ವಿಭಾಗದಲ್ಲಿ ಅಭಿಷೇಕ್ ವರ್ಮಾ ಅವರು ಕೇವಲ ಒಂದೇ-ಒಂದು ಅಂಕದ ಅಂತರದಿಂದ ಕೊರಿಯಾ ವಿರುದ್ಧ 232-233 ಅಂತರದಲ್ಲಿ ಪರಾಭವಗೊಂಡು ಬೆಳ್ಳಿ ಪದಕಕ್ಕೆೆ ತೃಪ್ತಿಪಟ್ಟುಕೊಂಡರು.
ಮಹಿಳೆಯರ ಕಾಪೌಂಡ್ ತಂಡದ ವಿಭಾಗದಲ್ಲಿ ಜ್ಯೋತಿ, ಮುಸ್ಕಾನ್ ಕಿರಾರ್ ಹಾಗೂ ಪ್ರಿಯಾ ಗುಜ್ರಾರ್ ಅವರನ್ನೊಳಗೊಂಡ ತಂಡ ಕೊರಿಯಾ ವಿರುದ್ಧ 215-231 ಅಂತರದಲ್ಲಿ ಸೋತು ಬೆಳ್ಳಿ ಪದಕ ಪಡೆಯಿತು.
ತಂಡದ ವಿಭಾಗದಲ್ಲಿ ಚಿನ್ನದ ಪದಕ ವಂಚಿತರಾದ ಅಭಿಷೇಕ್ ವರ್ಮಾ ಹಾಗೂ ಜ್ಯೋತಿ ಅವರು ಕಾಪೌಂಡ್ ಮಿಶ್ರ ವಿಭಾಗದಲ್ಲಿ ಚೈನೀಸ್ ತೈಫೆ ಜೋಡಿಯನ್ನು ಮಣಿಸಿ ಭಾರತಕ್ಕೆೆ ಮೊದಲ ಚಿನ್ನದ ಪದಕ ತಂದುಕೊಟ್ಟಿತು. ಮಂಗಳವಾರ ಭಾರತ ನಾಲ್ಕು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದರಲ್ಲಿ ಅತನು ದಾಸ್ ಮಹತ್ತರ ಪಾತ್ರವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 