ನೆರೆ ಪರಿಹಾರ ಕಾರ್ಯ ಚುರುಕುಗೊಳಿಸಿ: ಸಚಿವ ಪಾಟೀಲ
ಗದಗ : ರಾಜ್ಯದ ಗಣಿ, ಭೂವಿಜ್ಞಾನ, ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ನರಗುಂದದಲ್ಲಿ ಗದಗ ಜಿಲ್ಲೆ ನೆರೆ ಪೀಡಿತ ಗ್ರಾಮಗಳ ಸಂತ್ರಸ್ತರಿಗೆ ಒದಗಿಸಲಾಗುತ್ತಿರುವ ಪರಿಹಾರ ಕಾರ್ಯಗಳ ಪರಿಶೀಲನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿದರು. ಜಿಲ್ಲೆಯ ನರಗುಂದ, ರೋಣ ಹಾಗೂ ಶಿರಹಟ್ಟಿ ತಾಲೂಕುಗಳ ನೆರೆಹಾನಿಗೊಳಗಾದ ಗ್ರಾಮಗಳಲ್ಲಿ ಆದ ಹಾನಿಯ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.
ಸಂತ್ರಸ್ತರ ಮನೆ, ಬೆಳೆ, ಜಾನುವಾರು ಹಾನಿ ಕುರಿತಂತೆ ರಾಜ್ಯ ಸರ್ಕಾರವು ವಿಪತ್ತು ನಿರ್ವಹಣೆ ನಿಯಮಗಳಿಗಿಂತ ಹೆಚ್ಚಿನ ಪರಿಹಾರ ಘೋಷಿಸಿದೆ. ಅಧಿಕಾರಿಗಳು ಅರ್ಹ ಫಲಾನಿಭವಿಗಳಿಗೆ ವಿಳಂಬವಿಲ್ಲದೇ ಸರ್ಕಾರ ಘೋಷಿಸಿರುವ ಪರಿಹಾರ ವಿತರಿಸಲು ಚುರುಕಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಪೂರ್ಣ ಹಾನಿಯಾಗಿರುವ ಶಾಲಾ ಕೊಠಡಿಗಳಿಗೆ ತಕ್ಷಣ ತಾತ್ಕಾಲಿಕ ಶೆಡ್ ಗಳನ್ನು ನಿಮರ್ಿಸಬೇಕು. ಇತರ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಕುರಿತು ವಾಸ್ತವ ಸಮೀಕ್ಷೆ ಜೊತೆಗೆ ಅದರ ಪುನರನಿಮರ್ಾಣದ ಅಂದಾಜು ವೆಚ್ಚ ಸೇರಿದ ಪ್ರಸ್ತಾವನೆಯನ್ನು ವಿಳಂಬ ವಿಲ್ಲದೇ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಸಚಿವ ಸಿ.ಸಿ.ಪಾಟೀಲ ನಿದರ್ೆಶನ ನೀಡಿದರು.
ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಇದುವರೆಗೆ ನೀಡಲಾದ ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಿದರ. ಗದಗ ಉಪ ವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 