ಶಬರಿಮಲೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ
ನವದೆಹಲಿ: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಕುರಿತು ಸಲ್ಲಿಸಿದ್ದ ಅಜರ್ಿಯ ವಿಚಾರಣೆ ನಡೆಸಿದ ಸುಪ್ರೀಂಕೋಟರ್್ ಆದೇಶವನ್ನು ಕಾಯ್ದಿರಿಸಿದೆ.
ಅ ಅಜರ್ಿ ಸಂಬಂಧ ವಾದ ವಿವಾದ ಆಲಿಸಿದ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನಿಕ ಪೀಠ, ಏಳು ದಿನಗಳೊಳಗೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.
ವಿಚಾರಣೆ ಮುಗಿದಿದ್ದು, ತೀಪು ಕಾಯ್ದಿರಿಸಲಾಗಿದೆ. ವಾದ ಪ್ರತಿವಾದ ಮಂಡಿಸಿದ ವಕೀಲರಿಗೆ ಏಳು ದಿನಗಳೊಳಗೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಾಂವಿಧಾನಿಕ ಪೀಠದಲ್ಲಿದ್ದ ನ್ಯಾಯಮೂತರ್ಿಗಳಾದ ಆರ್ ಎಫ್ ನಾರಿಮನ್, ಎ, ಎಂ, ಖನ್ವೀಲ್ ಕರ್, ಡಿ. ವೈ. ಚಂದ್ರಚೂಡ್ ಹಾಗೂ ಇಂದು ಮಲ್ಹೋತ್ರಾ ಹೇಳಿದ್ದಾರೆ.
ಭಾರತದ ಯುವ ವಕೀಲರ ಸಂಘ ಮತಿತ್ತರರು ಸಲ್ಲಿಸಿದ್ದ ಅಜರ್ಿ ವಿಚಾರಣೆ ಸುಪ್ರೀಂಕೋಟರ್್ ನಲ್ಲಿ ನಡೆಯುತ್ತಿದ್ದು, ಮಹಿಳೆಯರಿಗೆ ಅವಕಾಶ ನಿರಾಕರಣೆ ಪ್ರಜಾಪ್ರಭುತ್ವದ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ನಿನ್ನೆ ಹೇಳಿಕೆ ನೀಡಿತ್ತು.
ಜುಲೈ 18 ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂದು ಹೇಳಿಕೆ ನೀಡಿತ್ತು. ನಂತರ ಕೇರಳ ಸಕರ್ಾರ ಕೂಡಾ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಂಡಿತ್ತು.
ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರಾಕರಣೆ ಮೂಲಕ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪ್ರಶ್ನಿಸಿ ಸುಪ್ರೀಂಕೋಟರ್್ ಗೆ ಸಲ್ಲಿಸಿದ ಅಜರ್ಿ ವಿಚಾರಣೆಯನ್ನು ಐದು ಪ್ರಶ್ನೆಗಳನ್ನು ರೂಪಿಸಿ ಸುಪ್ರೀಂಕೋಟರ್್ ಕಳೆದ ವರ್ಷ ಅಕ್ಟೋಬರ್ 13 ರಂದು ಸಾಂವಿಧಾನಿಕ ಪೀಠಕ್ಕೆ ವಗರ್ಾಯಿಸಿತ್ತು.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 