ದೇವರಹಿಪ್ಪರಗಿ 04: ಮೋಟಾರ್ ಬೈಕ್ ಗಳ ನಡುವೆ ಅಪಘಾತ ನಡೆದು ಬೈಕ್ ಸವಾರ ಪಟ್ಟಣದ ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸೋಮವಾರದಂದು ನಡೆದಿದೆ.
ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ಚಂದ್ರಮ ಬಸಪ್ಪ ಅಲದಿ(54) ಮೃತ ದುರ್ದೈವಿ. ಸಿಂದಗಿ ಮಾರ್ಗವಾಗಿ ವಿಜಯಪುರ ಪಟ್ಟಣಕ್ಕೆ ಹೋಗುವ ಮಧ್ಯೆ ತಾಂಡದಿಂದ ಇನ್ನೊಂದು ಬೈಕು ದೇವರಹಿಪ್ಪರಗಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಚಂದ್ರಮ ಮಾರ್ಗದ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಕಳೆದ ಎರಡು ದಿನಗಳಲ್ಲಿ ನಾಲ್ಕು ಅಪಘಾತಗಳು ಆಗಿದ್ದರಿಂದ ಜನ ಭಯಭೀತರಾಗಿದ್ದಾರೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಗಮನಹರಿಸಿ ಟ್ರಾಫಿಕ್ ಜಾಮ್ ನಿಯಂತ್ರಣ ಮಾಡಬೇಕು. ಇಲ್ಲವೇ ಬೈ ಪಾಸ್ ರಸ್ತೆ ನಿರ್ಮಾಣ ಮಾಡಬೇಕು ಈ ಕುರಿತು ಜಿಲ್ಲಾಧಿಕಾರಿಗಳು ಗಮನಹರಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರ, ಸಾರ್ವಜನಿಕರು ಹಾಗೂ ವಾಹನ ಸವಾರರ ಆಗ್ರಹವಾಗಿದೆ.ಶಂಕರಗೌಡ ಹಿರೇಗೌಡ.
ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ವಿಜಯಪುರ.