ಆಕಸ್ಮಿಕವಾಗಿ ಬೆಂಕಿ ಅವಘಡ: ನಿಂಬೆ ಬಾರಿ ಗೀಡಗಳು ಭಸ್ಮ
Accidental fire: Lemon tree plantations burnt to ashes
ಇಂಡಿ 14 : ಆಕಸ್ಮಿಕ ಘಟನೆ ಎಂದರೆ ಮುಂಚಿತವಾಗಿ ಊಹಿಸಲು ಸಾಧ್ಯವಾಗದ, ದಿಢೀರನೆ ಅಥವಾ ಅನೀರೀಕ್ಷಿತವಾಗಿ ಸಂಭವಿಸುವ ಘಟನೆಗಳು ಹಂತಾ ಘಟನೆ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಮಾರು ನೂರಾರು ನಿಂಬೆ ಹಾಗೂ ಬಾರಿ ಗೀಡಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಅಂಬಣ್ಣ ಸಿದ್ದಪ್ಪ ಪಂತೋಜಿ ಹಾಗೂ ಮಲ್ಲಿಕಾರ್ಜುನ ಸಿದ್ದಪ್ಪ ಪಂತೋಜಿ ಎಂಬೂವರ ಸರ್ವೇ 550/10 ನಂಬರಿನ 1-09 ಎಕರೆ ಹಾಗೂ 550/11 ನಂಬರಿನ 1-10 ಎಕರೆ ತೋಟಕ್ಕೆ ನಿನ್ನೆ ಬೆಂಕಿ ಹೊತ್ತಿಕೊಂಡು ಸುಮಾರು ನೂರಾರು ನಿಂಬೆ ಹಣ್ಣಿನ ಗೀಡಗಳು ಹಾಗೂ ಬಾರಿ ಹಣ್ಣಿನ ಗೀಡಗಳು ಸುಟ್ಟಿವೆ ಎಂದು ತಿಳಿದುಬಂದಿದೆ.
ಈ ಸುದ್ದಿ ತಿಳಿದು ತಕ್ಷಣ ಇಂಡಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಲು ಹರಸಾಹಸ ಪಟ್ಟರು ಹಾಗೂ ಮುಂದೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ.ಈ ಸುದ್ದಿ ತಿಳಿದು ಇಂಡಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ತಡವಲಗಾ ಆಡಳಿತ ಅಧಿಕಾರಿ ಮಾಹಾತೇಶ ಗುರುಭೆಟ್ಟಿ ಸ್ಥಳಕ್ಕೆ ಭೇಟಿ ಪಂಚನಾಮೆ ಮಾಡಿದರು.ಹಾನಿ ಆದ ಬಗೆ ಸರ್ಕಾರಕ್ಕೆ ಮಾಹಿತಿ ಸಲ್ಲಿಸಲಾಗುವುದು ಎಂದು ಹೇಳಿದರು.ಈ ಕುರಿತು ಹೋರ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಏನೇ ಇರಲಿ ನೋಂದ ರೈತನಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಲೋಕದರ್ಶನ ಪತ್ರಿಕೆ ಕಳಕಳಿಯಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 