ಆಕಸ್ಮಿಕ ಬೆಂಕಿ ತಗುಲಿ ಆಟೋಮೊಬೈಲ್ ಅಂಗಡಿಯೊಳಗಿನ ವಸ್ತುಗಳು ಸುಟ್ಟು ಕರಕಲಾದ ಘಟನ
Accidental fire destroys items inside automobile shop
ಶಿಗ್ಗಾವಿ 28 : ಆಕಸ್ಮಿಕ ಬೆಂಕಿ ತಗುಲಿ ಅಟೋ ಮೋಬೈಲ್ ಅಂಗಡಿಯೊಳಗಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಶಿಗ್ಗಾವಿ ಪಟ್ಟಣದ ಹೊಸ ಬಸ್ ನಿಲ್ದಾಣದ ಹತ್ತಿರದ ಶ್ರೀ ಸಾಯಿ ಅಟೋ ಮೋಬೈಲ್ ಅಂಗಡಿಯೊಂದರಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಟ್ಟಣದ ವಿಜಯ್ ಬುಳ್ಳಕ್ಕನವರ ಅವರಿಗೆ ಸೇರಿದ ಅಂಗಡಿಯಾಗಿದ್ದು, ರಾತ್ರಿ 9 ಘಂಟೆಗೆ ಅಂಗಡಿ ಮುಚ್ಚಿಕೊಂಡು ಮನೆಗೆ ಹೋದ ನಂತರ ಘಟನೆ ನಡೆದಿದೆ, ವಿದ್ಯುತ್ ಶಾರ್ಟ್ ಸೆರ್ಕ್ಯೂಟ್ನಿಂದ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಅಂದಾಜು 1 ಲಕ್ಷಕ್ಕೂ ಹೆಚ್ಚು ಅಟೋಮೊಬೈಲ್ ವಸ್ತುಗಳು ಸುಟ್ಟಿವೆ ಎಂದು ಅಂದಾಜಿಸಲಾಗಿದೆ.
ಸ್ಥಳೀಯರು ಅಂಗಡಿಯೋಳಗೆ ಹೊಗೆ ಆಡುತ್ತಿರುವುದನ್ನ ಕಂಡು ಕೂಡಲೇ ಮಾಲಕರಿಗೆ ಮಾಹಿತಿ ನೀಡಿ, ಬೀಗ ಒಡೆದು ನೀರು ಎರಚುವ ಮೂಲಕ ಸುಡುತ್ತಿರುವ ವಸ್ತುಗಳ ಹೆಚ್ಚಿನ ಹಾನಿಯನ್ನ ತಡೆದಿದ್ದಾರೆ, ನಂತರ ಅಗ್ನಿಶಾಮಕದಳ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ, ಈ ಕುರಿತು ಶಿಗ್ಗಾವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 