ಮಾರಕಾಸ್ತ್ರ ಹೊಂದಿದ ಆರೋಪಿ ಬಂಧನ: ಆಯುಧ ಜಪ್ತಿ
Accused arrested for possessing deadly weapon: Weapon seized
ಬೆಳಗಾವಿ 28; ಮಾರಕಾಸ್ತ್ರ ಹೊಂದಿದ್ದ ಆರೋಪಿಯನ್ನು ಬಂದಿಸಿ ಆತನಿಂದ ಹರಿತವಾದ ಆಯುಧವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಂಭಾಜಿ ಗಲ್ಲಿ ಮಹಾದ್ವಾರ ರೋಡ ನಿವಾಸಿ ಪ್ರಜ್ವಲ ಶಂಕರ ಕಿತ್ತವಾಡಕರ (28) ಬಂಧಿತ ಆರೋಪಿಯಾಗಿದ್ದಾನೆ.
ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸ್ಟ್ಯಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಂಶಯಾಸ್ಪದ ವ್ಯಕ್ತಿಗಳನ್ನು ಪರೀಶೀಲನೆ ಮಾಡುತ್ತಿರುವಾಗ
ದಿ. 27ರಂದು ರಾತ್ರಿ ಮಾರ್ಕೆಟ್ ಪೊಲೀಸ್ ಠಾಣೆ ಪಿಎಸ್ಐ ವಿಠ್ಠಲ ಹಾವನ್ನವರ ಅವರು ನಗರದ ಮಾಣಿಕಭಾಗ ಶೋ ರೂಮ್ ಎದುರುಗಡೆ ಓವರ್ ಬ್ರಿಡ್ಜ್ ಕೆಳಗಡೆ ಆರೋಪಿ ಹತ್ತಿರ ಕಾನೂನು ಬಾಹಿರವಾಗಿ ಹರಿತವಾದ ಸ್ಟೀಲ್ ಚಾಕು ಸಿಕ್ಕಿದ್ದನ್ನು ವಶಪಡಿಸಿಕೊಂಡಿದ್ದು, ಈತನ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.
ದಾಳಿ ಕೈಗೊಂಡ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪಿಎಸ್ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 