ಸಾಧನೆಯು ಸಾಧಕನ ಸ್ವತ್ತು, ಸೋಮಾರಿಯ ಸ್ವತ್ತಲ್ಲ
Achievement is the property of the achiever
ತಾಳಿಕೋಟಿ 31: ಸಾಧನೆಯು ಸಾಧಕನ ಸ್ವತ್ತು, ಸೋಮಾರಿಯ ಸ್ವತ್ತಲ್ಲ, ಸಾಧಿಸಬೇಕೆಂಬುವ ಛಲ ಇದ್ದರೆ ಯಾವುದೇ ಸಮಸ್ಯೆ, ಸವಾಲುಗಳು ನಮ್ಮನ್ನು ತಡೆಯುವುದಿಲ್ಲ. ಸಾಧಿಸಲೇಬೇಕೆಂಬ ಹಠ ಮತ್ತು ನಿರಂತರವಾದ ಪರಿಶ್ರಮ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಕರ್ನಾಟಕ ರಾಜ್ಯ ವೀಲ್ ಚೇರ್ ಬಾಸ್ಕೆಟ್ ಬಾಲ್ ಕ್ರೀಡಾಪಟುಗಳ ಸಾಧನೆ ಉದಾರಣೆಯಾಗಿದೆ.
ನವಂಬರ್ 4 ರಿಂದ 16 ರವರೆಗೆ ಥೈಲ್ಯಾಂಡಿನ ಬ್ಯಾಂಕಾಕ್ ನಲ್ಲಿ ನಡೆಯಲಿರುವ ವೀಲ್ ಚೇರ ಬಾಸ್ಕೆಟ್ ಬಾಲ್ ಏಷಿಯಾ ಒಷಿಯನ್ ಝೇನ್ ಚಾಂಪಿಯನಶಿಪ್ 2025 ಅಂತಾರಾಷ್ಟ್ರೀಯ ಪಂದ್ಯಾವಳಿಗೆ ಕರ್ನಾಟಕ ರಾಜ್ಯದಿಂದ ನಾಲ್ಕು ಕ್ರೀಡಾಪಟುಗಳು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ತಂಡದ ನಾಯಕನಾದ ಬಸಪ್ಪ ಸುನದೋಳಿ, ಸಿದ್ದಪ್ಪ ಪಟುಗುಂದಿ ಪುರುಷರ ತಂಡದಲ್ಲಿ ಆಯ್ಕೆಯಾದರೆ, ಲಲಿತಾ ಗವಸ್, ಲಕ್ಷ್ಮಿ ರಾಯಣ್ಣವರ್ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅ. 1ರಿಂದ 10ವರೆಗೆ ನಡೆದ ರಾಷ್ಟ್ರೀಯ ವಿಲ್ ಚೇರ್ ಬಾಸ್ಕೆಟ್ ಬಾಲ್ ಚಾಂಪಿಯನ್ಶಿಪ್ 2025 ರಲ್ಲಿ ಕರ್ನಾಟಕ ಪುರುಷ ಮತ್ತು ಮಹಿಳಾ ತಂಡಗಳು ಉತ್ತಮ ಪ್ರದರ್ಶನ ನೀಡಿದ ಪುರುಷರ ತಂಡ ದ್ವಿತೀಯ ಸ್ಥಾನ ಮತ್ತು ಮಹಿಳಾ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದವು ಕರ್ನಾಟಕದಿಂದ ಈ ನಾಲ್ಕು ಕ್ರೀಡಾಪಟುಗಳು ಉತ್ತಮ ಪ್ರದರ್ಶನವನ್ನು ನೀಡಿದ್ದರು. ಇದರ ಆಧಾರದ ಮೇಲೆ ಇವರು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ ಕರ್ನಾಟಕ ರಾಜ್ಯ ವಿಲ್ ಚೇರ್ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಕಾಂಚನ್ ಖೋತ್ ಮತ್ತು ಕಾರ್ಯದರ್ಶಿಯಾದ ಸಂಜೀವಕುಮಾರ್ ಹಜೇರಿ ಹಾಗೂ ಸಂಸ್ಥೆಯ ಎಲ್ಲ ಸದಸ್ಯರು ಅಭಿನಂದನೆಗಳೂ ಹಾಗೂ ಭಾರತ ತಂಡ ಪ್ರಥಮ ಸ್ಥಾನ ಗಳಿಸಿ ಬರಲಿ ಎಂದು ಶುಭ ಹಾರೈಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 