ಕಬ್ಬು ತೂಕದಲ್ಲಿ ವಂಚನೆ ಮಾಡುವವರ ವಿರುದ್ಧ ಕ್ರಮ: ಸಚಿವ ಶಿವಾನಂದ ಪಾಟೀಲ್
Action against those who cheat in sugarcane weighing: Minister Shivanand Patil
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮಂಗಳವಾರದಂದು, ವಿಧಾನಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಕುರಿತು ಮಾತನಾಡಿದರು.
ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೆ ಟೆಂಡರ್ ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ. ರೈತರು ದೂರು ಸಲ್ಲಿಸಿ, ಬಳಿಕ ಇದು ಸಾಬೀತಾದಲ್ಲಿ ಅಂತಹ ರೈತರಿಗೆ 2 ಲಕ್ಷ ರೂ. ಬಹುಮಾನ ಕೊಡುತ್ತೇವೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಈ ಬಹುಮಾನ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಒಂದು ವೇಳೆ ತೂಕದಲ್ಲಿ ಮೋಸ ಮಾಡುವ ಯಾವುದೇ ದೂರು ಸಾಬೀತಾದಲ್ಲಿ, ಅಂತಹ ಕಾರ್ಖಾನೆಯವರು ಯಾರೇ ಆಗಿರಲಿ, ಎಷ್ಟೇ ದೊಡ್ಡವರಾಗಿರಲಿ, ನಿಶ್ಚಿತವಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅಂತಹ ಕಾರ್ಖಾನೆ ನಿಲ್ಲಿಸುವ ಕ್ರಮಕ್ಕೂ ಮುಂದಾಗುತ್ತೇವೆ. ಕಾರ್ಖಾನೆಗಳ ಒಳಗೆ ನಾವು ಆಧುನಿಕ ತೂಕದ ಯಂತ್ರ ಅಳವಡಿಕೆಗೆ ಮುಂದಾಗಿದ್ದು, ಕಾರ್ಖಾನೆಯವರು ಅನುಮತಿ ನೀಡುತ್ತಿಲ್ಲ, ಇದರಿಂದ ಸಮಸ್ಯೆ ಉಂಟಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.
ಸರ್ಕಾರವೇ ಕಾರ್ಖಾನೆ ಪ್ರಾರಂಭಕ್ಕೆ ಅನುಮತಿ ಹಾಗೂ ಉಳಿದ ಎಲ್ಲ ಸೌಲಭ್ಯಗಳನ್ನೂ ನೀಡಿದೆ. ಹೀಗಾಗಿ ಸರ್ಕಾರಕ್ಕೆ ಅಸಹಕಾರ ತೋರುವ ಕಾರ್ಖಾನೆಗಳಿಗೆ ವಿದ್ಯುತ್ ಪೂರೈಕೆ ನಿಲ್ಲಿಸಬೇಕು. ಈ ಕುರಿತಂತೆ ಇಂಧನ ಸಚಿವರು, ಕಂದಾಯ ಸಚಿವರು ಮತ್ತು ಸಕ್ಕರೆ ಖಾತೆ ಸಚಿವರು ಸೇರಿದಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ರೈತರಿಗೆ ಅನ್ಯಾಯ ಆಗುವುದನ್ನು ತಡೆಗಟ್ಟಬೇಕು ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಸಲಹೆ ನೀಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 