ಪ್ರತ್ಯೇಕ ಜಾತಿ ಪ್ರಮಾಣ ಪತ್ರ ವಿತರಣೆಗೆ ಕ್ರಮ : ಸಚಿವ ಕೃಷ್ಣಬೈರೇಗೌಡ
Action for distribution of separate caste certificates: Minister Krishnabyre Gowda
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16: ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಸಮುದಾಯಗಳ ಸಿವಿಲ್ ಗುತ್ತಿಗೆದಾರರಿಗೆ ಸರ್ಕಾರದ ಕಾಮಗಾರಿಗಳಲ್ಲಿ ರೂ.1 ಕೋಟಿವರೆಗೆ ಮೀಸಲಾತಿ ಹಾಗೂ ಉದ್ಯಮಿಗಳಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.6 ರಂತೆ ಬಡ್ಡಿದರದಲ್ಲಿ ರೂ.10 ಕೋಟಿಗಳ ವರೆಗಿನ ಸಾಲ ನೀಡುವ ಮತ್ತು ಸಹಾಯಧನ ಕಲ್ಪಿಸುವ ಯೋಜನೆ ಪಡೆಯಲು ನಮೂನೆ-ಐ ನಲ್ಲಿ ಜಾತಿ ಪ್ರಮಾಣ ಪತ್ರವನ್ನು ವಿತರಿಸಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿಕೊಡಲು 2 ರಾಷ್ಟ್ರೀಯ ಮಾಹಿತಿ ಕೇಂದ್ರಕ್ಕೆ ಕೋರಲಾಗಿದ್ದು, ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು 2ಎ ಸಮುದಾಯಗಳಿಗೆ ಸೇರಿದವರಿಗೆ ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ರೂ.1 ಕೋಟಿಯವರೆಗೆ ಮೀಸಲಾತಿ ತಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದ್ದು, ಕಂದಾಯ ಇಲಾಖೆಯಿಂದ ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡಬೇಕಾಗಿದೆ. ಇದರ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯರಾದ ಡಾ.ಯತೀಂದ್ರ ಎಸ್ ಅವರು ನಿಯಮ 72ರ ಮೇರೆಗೆ ಕೋರಿದ ಗಮನ ಸೆಳೆಯುವ ಸೂಚನೆಗೆ ಪರಿಷತ್ತಿನಲ್ಲಿ ಡಿ.16ರಂದು ಸಚಿವರು ಲಿಖಿತ ಉತ್ತರ ನೀಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 