ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಪುನಶ್ಚೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ
Action for revival of Karnataka Handloom Development Corporation said Minister Sivananda Patil
ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಾರ್ವಜನಿಕ ಉದ್ದಿಮೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವನ್ನು ಕರ್ನಾಟಕ ಜವಳಿ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಜೊತೆಗೆ ವಿಲೀನಗೊಳಿಸಲು ನಿರ್ಣಯಿಸಲಾಗಿದೆ. ಈ ವಿಲೀನ ಪ್ರಕ್ರಿಯೆ ಪ್ರಾರಂಭಿಕ ಹಂತದಲ್ಲಿದ್ದು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಜೊತೆಗೆ ವಿಲೀನಗೊಳಿಸುವ ಸಂದರ್ಭದಲ್ಲಿ ಕೈಮಗ್ಗ ನೇಕಾರರ ಹಿತವನ್ನು ಕಾಯ್ದುಕೊಳ್ಳಲು ನಾನಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವಿಲೀನ ಪ್ರಕ್ರಿಯೆ ಆದ ನಂತರವು ಮುಂದುವರೆಸಲಾಗುತ್ತದೆ.
ಕೆ.ಹೆಚ್.ಡಿ.ಸಿ. ನಿಗಮದ ನೇಕಾರರಿಗೆ ನಿರಂತರ ನೂಲು ಪೂರೈಕೆ ಮಾಡಿ ಉದ್ಯೋಗ ಒದಗಿಸುವುದು., ಕೆ.ಹೆಚ್.ಡಿ.ಸಿ. ನಿಗಮದ ನೇಕಾರರಿಗೆ ಪರಿವರ್ತನಾ ಶುಲ್ಕ ಪಾವತಿಸುವುದು, ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲು ಇ-ಕಾಮರ್ಸ್ ವೇದಿಕೆ ಕಲ್ಪಿಸುವುದು ಮತ್ತು ಬೆಂಗಳೂರು ಅಂತರಾಷ್ಟ್ರೀಯ ನಿಲ್ದಾಣದ ಆವರಣದಲ್ಲಿ ಕೈಮಗ್ಗ ಮಾರಾಟ ಮಳಿಗೆಯ ಕಲಾಲೋಕ ಸ್ಥಾಪನೆ ಮೂಲಕ ಮಾರುಕಟ್ಟೆ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 