ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ
Action taken for purchase of fire engines in the state: Dr. G. Parameshwara
ಬೆಳಗಾವಿ ಸುವರ್ಣ ವಿಧಾನಸೌಧ ಡಿ.18: ರಾಜ್ಯದ ವಿವಿಧ ಅಗ್ನಿಶಾಮಕ ಠಾಣೆಗಳಿಗೆ ಅತ್ಯಂತ ಅಗತ್ಯವಿರುವ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಶರಣಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,
ಅಗ್ನಿಶಾಮಕ ಇಲಾಖೆಯಲ್ಲಿ 15 ವರ್ಷ ಮೇಲ್ಪಟ್ಟು ರಸ್ತೆ ಚಾಲನೆಯಿಂದ ಸ್ಥಗಿತಗೊಂಡಿರುವ ಒಟ್ಟು 358 ವಾಹನಗಳ ಪೈಕಿ 93 ವಾಹನಗಳನ್ನು ಉಪಯೋಗಿಸಲು ಮುಂದಿನ 05 ವರ್ಷಗಳ ಅವಧಿಗೆ ರಸ್ತೆ ಚಾಲನೆಗೆ ವಿನಾಯಿತಿ ನೀಡಿ ಕಾಲಾವಧಿ ವಿಸ್ತರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಈ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆಯ 03 ವಾಹನಗಳೂ ಸೇರಿವೆ.ಪ್ರಸ್ತುತ 150 ಜಲವಾಹನಗಳ ಕವಚ ನಿರ್ಮಾಣ ಮಾಡಲು ಕಾರ್ಯಾದೇಶ ನೀಡಲಾಗಿದ್ದು, ಇದರಲ್ಲಿ 25 ವಾಹನಗಳನ್ನು ಸ್ವೀಕರಿಸಿ ಅಗ್ನಿಶಾಮಕ ಠಾಣೆಗಳಿಗೆ ಮಂಜೂರು ಮಾಡಲಾಗಿದೆ. ಪ್ರಸ್ತುತ 15 ಜಲವಾಹನಗಳನ್ನು ಅಗ್ನಿಶಾಮಕ ಇಲಾಖೆಯಲ್ಲಿ ಸ್ವೀಕರಿಸಿದ್ದು, ಈ ವಾಹನಗಳಿಗೆ ಕೆ.ಜಿ.ಐ.ಡಿ ವಿಮೆ ಮತ್ತು ಆರ್.ಟಿ.ಓ. ನೋಂದಣಿ ಮಾಡಿಸುವ ಕೆಲಸ ಪ್ರಗತಿಯಲ್ಲಿದೆ. ಬಾಕಿ ಉಳಿದ 110 ಜಲವಾಹನಗಳ ಕವಚ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು, ಸರಬರಾಜಾದ ನಂತರ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಅಗ್ನಿಶಾಮಕ ಠಾಣೆಗಳಿಗೆ ಜಲವಾಹನಗಳನ್ನು ಮಂಜೂರು ಮಾಡಲು ಪರೀಶೀಲಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 