ನಟ ದರ್ಶನ್ ಜಾಮೀನು ರದ್ದು ಕೋರಿ ಪೊಲೀಸರ ಮೇಲ್ಮನವಿ
Actor Darshan appeals to the police seeking cancellation of bail
ಬೆಂಗಳೂರು 06: ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ನಟ ದರ್ಶನ್ ಸೇರಿದಂತೆ 7 ಮಂದಿಯ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ ಅವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ ನಿಶಾನಿ ಅವರು ಪೊಲೀಸರ ಪರವಾಗಿ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ.
ಇತ್ತ ದರ್ಶನ್ ಅವರಿಗೆ ಮೈಸೂರಿಗೆ ತೆರಳಲು ಕೋರ್ಟ್ ನೀಡಿದ್ದ ಎರಡು ವಾರಗಳ ಗಡುವು ಭಾನುವಾರಕ್ಕೆ ಅಂತ್ಯಗೊಂಡಿದೆ. ಬೆಂಗಳೂರಿಗೆ ಆಗಮಿಸುವ ನಟ ದರ್ಶನ್ ತಮ್ಮ ಅನುಮತಿ ವಿಸ್ತರಣೆ ಮಾಡುವಂತೆ ಮತ್ತೆ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ. ಬೆನ್ನು ನೋವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ದರ್ಶನ್ ಅವರು ಸರ್ಜರಿಗೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 