ʼಥಗ್ ಲೈಫ್ʼ ರಿಲೀಸ್ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ನಟ ಕಮಲ್ ಹಾಸನ್
Actor Kamal Haasan moves High Court for release of 'Thug Life'
ಬೆಂಗಳೂರು 06: ಕನ್ನಡ ಭಾಷೆಯ ಬಗ್ಗೆ ಮಾತನಾಡಿ, ಹಿರಿಯ ನಟ ಕಮಲ್ ಹಾಸನ್ ವಿವಾದದಲ್ಲಿ ಸಿಲುಕಿದ್ದಾರೆ.
ಇತ್ತೀಚೆಗೆ
ಸಿನಿಮಾದ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ʼʼಕನ್ನಡ ಹುಟ್ಟಿದ್ದು, ತಮಿಳಿನಿಂದ” ಎಂದು ಮಾತನಾಡಿದ್ದರು. ಕನ್ನಡದ ಶಿವರಾಜ್ ಕುಮಾರ್ ಮುಂದೆಯೇ ಈ ಮಾತನ್ನು ಆಡಿದ್ದರು.
ಅವರ
ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರಿಂದ ʼಥಗ್ ಲೈಫ್ʼ ಸಿನಿಮಾಕ್ಕೆ ಸಂಕಷ್ಟ ಎದುರಾಗಿದೆ. 300 ಕೋಟಿ ರೂ. ನಿರ್ಮಾಣದ ಸಿನಿಮಾ ರಿಲೀಸ್ಗೆ ದಿನಗಣನೆ ಇರುವಾಗಲೇ
ಈ ವಿವಾದ ಹುಟ್ಟಿರುವುದು ಚಿತ್ರತಂಡಕ್ಕೆ ಸಂಕಷ್ಟ ತಂದಿಡುವ ಸಾಧ್ಯತೆಯಿದೆ.
ಕಮಲ್
ಹಾಸನ್ ಕನ್ನಡಿಗರಲ್ಲಿ ಕ್ಷಮೆ ಕೇಳದೆ ಇದ್ರೆ, ಅವರ ʼಥಗ್ ಲೈಫ್ʼ ಸಿನಿಮಾವನ್ನು ರಿಲೀಸ್
ಮಾಡಲು ಬಿಡುವುದಿಲ್ಲವೆಂದು, ಈ ವಿಚಾರದಲ್ಲಿ ಫಿಲಂ
ಚೇಂಬರ್ ಖಡಕ್
ಎಚ್ಚರಿಕೆಯನ್ನು ನೀಡಿದೆ. ಆದರೆ ಇದುವರೆಗೆ ಕಮಲ್ ಹಾಸನ್ ಕ್ಷಮೆ ಕೇಳಿಲ್ಲ.
ಇದೀಗ
ಕರ್ನಾಟಕದಲ್ಲಿ ʼಥಗ್ ಲೈಫ್ʼ ಸಿನಿಮಾಕ್ಕೆ ಎದುರಾಗಿರುವ ಸಂಕಷ್ಟ ಪರಿಹಾರಕ್ಕೆ ನಿರ್ಮಾಣ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದೆ.
ಕಮಲ್ ಹಾಸನ್ ಒಡೆತನದ ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ʼಥಗ್ ಲೈಫ್ʼ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕೆಂದು ಹೈಕೋರ್ಟ್ ಮೊರೆ ಹೋಗಿದೆ.
ವಾಣಿಜ್ಯ
ಮಂಡಳಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದು, ಕಮಲ್ ಹಾಸನ್ ಹೇಳಿಕೆಗೆ, ಚಿತ್ರಕ್ಕೂ ಸಂಬಂಧವಿಲ್ಲ. ಸಿಬಿಎಫ್ ಸಿನಿಂದ ಚಿತ್ರಕ್ಕೆ ಪ್ರಮಾಣ ಪತ್ರವನ್ನು ಪಡೆಯಲಾಗಿದೆ. ಚಿತ್ರ ರಿಲೀಸ್ಗೆ ವಾಣಿಜ್ಯ ಮಂಡಳಿ
ನಿರ್ಬಂಧ ಹೇರುತ್ತಿರುವುದು ಸರಿಯಲ್ಲ. ಸಿನಿಮಾ ಬಿಡುಗಡೆಗೆ ಅವಕಾಶ ಕಲ್ಪಿಸಬೇಕೆಂದು ಅರ್ಜಿಯಲ್ಲಿ ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 